‘ರಾಜಕಾರಣದಲ್ಲಿ ನನಗಿಂತ ಸಿದ್ದರಾಮಯ್ಯ ಅನುಭವಸ್ಥರು. ನಾನು ಒಂದು ಮಾತು ಹೇಳಲು ಬಯಸುತ್ತೇನೆ. ಈ ಚುನಾವಣೆ ಕಾಂಗ್ರೆಸ್ ಪಕ್ಷದ ಗೆಲುವಾಗುತ್ತದೆ. ನಾವು ಹತ್ತು ಟೇಕ್ ತೆಗೆದುಕೊಳ್ಳಲು ಸಿನಿಮಾ ಮಾಡುತ್ತಿಲ್ಲ. ಅವರ ರೀತಿ ಕಟ್ ಆ್ಯಂಡ್ ಪೇಸ್ಟ್ ಮಾಡುವುದಿಲ್ಲ. ಮುನಿರತ್ನ ಗೆದ್ದರೆ ಕೇವಲ ಇಂಧನ ಖಾತೆ ಯಾಕೆ, ಮುಖ್ಯಮಂತ್ರಿ ಸ್ಥಾನವನ್ನೇ ಪಡೆಯಲಿ’ ಎಂದ ಅವರು, ‘ಇದು ಕೇವಲ ಬಿಜೆಪಿ ಸರ್ಕಾರ ಅಲ್ಲ, ಕಾಂಗ್ರೆಸ್- ಬಿಜೆಪಿ ಸರ್ಕಾರ’ ಎಂದು ಗೇಲಿ ಮಾಡಿದರು.