<p><strong>ಬೆಂಗಳೂರು:</strong> ರಾಜ್ಯ ಸರ್ಕಾರ ‘ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ–2021’ ಅನ್ನು ಪ್ರಸ್ತಾಪಿಸಿ ಶನಿವಾರ ಅಧಿಸೂಚನೆ ಹೊರಡಿಸಿದೆ.</p>.<p>ರಾಜ್ಯ ಸರ್ಕಾರ ಭಾಗಿಯಾಗಿರುವ ವ್ಯಾಜ್ಯಗಳನ್ನು ಪರಿಹರಿಸುವ ಸಂದರ್ಭದಲ್ಲಿ ಹೊಣೆಗಾರಿಕೆ, ಉತ್ತರದಾಯಿತ್ವ ಮತ್ತು ದಕ್ಷತೆಯಿಂದ ಕಾರ್ಯಪ್ರವೃತ್ತರಾಗುವುದು ಈ ನೀತಿಯ ಉದ್ದೇಶವಾಗಿದೆ.</p>.<p>ವಿವಾದಗಳನ್ನು ಪರಸ್ಪರ ಸಹಮತ, ಸೌಹಾರ್ದಯುತವಾಗಿ ಪರಿಹರಿಸಲು ಆದ್ಯತೆ ನೀಡಬೇಕು. ಆ ಮೂಲಕ, ಸಮಯ ಮತ್ತು ಅನಾಶ್ಯಕ ವೆಚ್ಚಕ್ಕೆ ನಿಯಂತ್ರಿಸಬಹುದು. ಆ ಹೊಣೆಗಾರಿಕೆಯಲ್ಲಿ ವಿವಾದಗಳಿಗೆ ಅಂತ್ಯ ಹಾಡಲು ನೀತಿ ನೆರವಾಗಲಿದೆ.</p>.<p>‘ಕರ್ನಾಟಕ ರಾಜ್ಯ ದಾವೆ ನೀತಿ 2011ರಲ್ಲಿ ರಚನೆಯಾಗಿದ್ದು, ಅದು ಈಗಲೂ ಜಾರಿಯಲ್ಲಿದೆ. ವಿವಾದಗಳನ್ನು ಪರಿಣಾಮಕಾರಿಯಾಗಿ ಮತ್ತು ಹೊಣೆಗಾರಿಕೆಯಿಂದ ಪರಿಹರಿಸುವ ಉದ್ದೇಶದಿಂದ ಈ ನೀತಿ ಜಾರಿಗೆ ತರಲಾಗಿತ್ತು. ಈ ಬಗ್ಗೆ 2018ರಲ್ಲಿ ನಡೆದ ಅಧ್ಯಯನ ಪ್ರಕಾರ ಈ ನೀತಿ ಸಮರ್ಪಕವಾಗಿ ಜಾರಿಯಾಗಿಲ್ಲ. ಸರ್ಕಾರದ ದಾವೆಗಳನ್ನು ನಿಭಾಯಿಸುವ ಪ್ರಕ್ರಿಯೆಯ ವೇಳೆ ದಕ್ಷತೆ ಮತ್ತು ಹೊಣೆಗಾರಿಕೆ ಇಲ್ಲದಿರುವುದು ಗೊತ್ತಾಗಿತ್ತು. ಹೀಗಾಗಿ, ಅದನ್ನು ಪರಿಷ್ಕರಿಸಿ ಹೊಸ ನೀತಿಯನ್ನು ಜಾರಿಗೆ ತರಲು ಇದೀಗ ಅಧಿಸೂಚನೆ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಸರ್ಕಾರ ‘ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ–2021’ ಅನ್ನು ಪ್ರಸ್ತಾಪಿಸಿ ಶನಿವಾರ ಅಧಿಸೂಚನೆ ಹೊರಡಿಸಿದೆ.</p>.<p>ರಾಜ್ಯ ಸರ್ಕಾರ ಭಾಗಿಯಾಗಿರುವ ವ್ಯಾಜ್ಯಗಳನ್ನು ಪರಿಹರಿಸುವ ಸಂದರ್ಭದಲ್ಲಿ ಹೊಣೆಗಾರಿಕೆ, ಉತ್ತರದಾಯಿತ್ವ ಮತ್ತು ದಕ್ಷತೆಯಿಂದ ಕಾರ್ಯಪ್ರವೃತ್ತರಾಗುವುದು ಈ ನೀತಿಯ ಉದ್ದೇಶವಾಗಿದೆ.</p>.<p>ವಿವಾದಗಳನ್ನು ಪರಸ್ಪರ ಸಹಮತ, ಸೌಹಾರ್ದಯುತವಾಗಿ ಪರಿಹರಿಸಲು ಆದ್ಯತೆ ನೀಡಬೇಕು. ಆ ಮೂಲಕ, ಸಮಯ ಮತ್ತು ಅನಾಶ್ಯಕ ವೆಚ್ಚಕ್ಕೆ ನಿಯಂತ್ರಿಸಬಹುದು. ಆ ಹೊಣೆಗಾರಿಕೆಯಲ್ಲಿ ವಿವಾದಗಳಿಗೆ ಅಂತ್ಯ ಹಾಡಲು ನೀತಿ ನೆರವಾಗಲಿದೆ.</p>.<p>‘ಕರ್ನಾಟಕ ರಾಜ್ಯ ದಾವೆ ನೀತಿ 2011ರಲ್ಲಿ ರಚನೆಯಾಗಿದ್ದು, ಅದು ಈಗಲೂ ಜಾರಿಯಲ್ಲಿದೆ. ವಿವಾದಗಳನ್ನು ಪರಿಣಾಮಕಾರಿಯಾಗಿ ಮತ್ತು ಹೊಣೆಗಾರಿಕೆಯಿಂದ ಪರಿಹರಿಸುವ ಉದ್ದೇಶದಿಂದ ಈ ನೀತಿ ಜಾರಿಗೆ ತರಲಾಗಿತ್ತು. ಈ ಬಗ್ಗೆ 2018ರಲ್ಲಿ ನಡೆದ ಅಧ್ಯಯನ ಪ್ರಕಾರ ಈ ನೀತಿ ಸಮರ್ಪಕವಾಗಿ ಜಾರಿಯಾಗಿಲ್ಲ. ಸರ್ಕಾರದ ದಾವೆಗಳನ್ನು ನಿಭಾಯಿಸುವ ಪ್ರಕ್ರಿಯೆಯ ವೇಳೆ ದಕ್ಷತೆ ಮತ್ತು ಹೊಣೆಗಾರಿಕೆ ಇಲ್ಲದಿರುವುದು ಗೊತ್ತಾಗಿತ್ತು. ಹೀಗಾಗಿ, ಅದನ್ನು ಪರಿಷ್ಕರಿಸಿ ಹೊಸ ನೀತಿಯನ್ನು ಜಾರಿಗೆ ತರಲು ಇದೀಗ ಅಧಿಸೂಚನೆ ಹೊರಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>