ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಮಸೂದೆ

ಹೊಸ ವಾರ್ಡ್‌ಗಳ ರಚನೆಗೆ ಪುನರ್ ವಿಂಗಡಣಾ ಆಯೋಗ
Last Updated 23 ಸೆಪ್ಟೆಂಬರ್ 2020, 19:35 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ‘ಕರ್ನಾಟಕ ಪೌರಸಭೆಗಳ ಕಾಯ್ದೆ (ಮೂರನೇ ತಿದ್ದುಪಡಿ) ಮಸೂದೆ’ಯನ್ನು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದೆ.

ಬಿಬಿಎಂಪಿ ಮಸೂದೆಯ ಪರಾಮರ್ಶೆಗಾಗಿ ಕಳೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಜಂಟಿ ಸದನ ಸಲಹಾ ಸಮಿತಿ ರಚಿಸಲು ನಿರ್ಧರಿಸಲಾಗಿತ್ತು. ಈ ಸಮಿತಿಯು ಸರ್ಕಾರಕ್ಕೆಮಂಗಳವಾರ ಸಲ್ಲಿಸಿದ ವರದಿಯಲ್ಲಿ, ವಾರ್ಡ್‌ಗಳ ಸಂಖ್ಯೆಯನ್ನು 250 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿತ್ತು.

ಈ ಶಿಫಾರಸು ಜಾರಿ ಮಾಡಲು ಮುಂದಾಗಿರುವ ಸರ್ಕಾರ ಇದಕ್ಕೆ ಪೂರಕವಾಗಿ ಮಸೂದೆಯನ್ನು ಬುಧವಾರ ಮಂಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT