ಬೆಂಗಳೂರು: ಬಿಬಿಎಂಪಿ ಚುನಾವಣೆ ಮುಂದೂಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ‘ಕರ್ನಾಟಕ ಪೌರಸಭೆಗಳ ಕಾಯ್ದೆ (ಮೂರನೇ ತಿದ್ದುಪಡಿ) ಮಸೂದೆ’ಯನ್ನು ವಿಧಾನಸಭೆಯಲ್ಲಿ ಮಂಡಿಸಿ ಒಪ್ಪಿಗೆ ಪಡೆದಿದೆ.
ಬಿಬಿಎಂಪಿ ಮಸೂದೆಯ ಪರಾಮರ್ಶೆಗಾಗಿ ಕಳೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಜಂಟಿ ಸದನ ಸಲಹಾ ಸಮಿತಿ ರಚಿಸಲು ನಿರ್ಧರಿಸಲಾಗಿತ್ತು. ಈ ಸಮಿತಿಯು ಸರ್ಕಾರಕ್ಕೆಮಂಗಳವಾರ ಸಲ್ಲಿಸಿದ ವರದಿಯಲ್ಲಿ, ವಾರ್ಡ್ಗಳ ಸಂಖ್ಯೆಯನ್ನು 250 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿತ್ತು.
ಈ ಶಿಫಾರಸು ಜಾರಿ ಮಾಡಲು ಮುಂದಾಗಿರುವ ಸರ್ಕಾರ ಇದಕ್ಕೆ ಪೂರಕವಾಗಿ ಮಸೂದೆಯನ್ನು ಬುಧವಾರ ಮಂಡಿಸಿತು.