ಬೆಂಗಳೂರು: ರೈಲ್ವೆ ಎಡಿಜಿಪಿಯಾಗಿರುವ ಭಾಸ್ಕರರಾವ್ ಅವರು ಸ್ವಯಂ ನಿವೃತ್ತಿಗಾಗಿ ಸಲ್ಲಿಸಿರುವ ಅರ್ಜಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ ಎಂದು ಮೂಲಗಳು ತಿಳಿಸಿವೆ.
ಸೇವೆಯಿಂದ ನಿವೃತ್ತಿ ಪಡೆದು 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವೊಂದರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರು ಬಯಸಿದ್ದರು. ಆದರೆ, ಸರ್ಕಾರದ ನಿರ್ಧಾರದಿಂದ ಅವರಿಗೆ ಹಿನ್ನಡೆಯಾಗಿದೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅದಕ್ಕೆ ಸಂಬಂಧಿಸಿದ ಕಡತ ಮುಖ್ಯಮಂತ್ರಿ ಅವರ ಬಳಿ ಇದ್ದು, ಅವರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಹೇಳಿದರು.