‘ಮಂಡಳಿಯ ಅಧ್ಯಕ್ಷ ಶಾಂತ್ ತಿಮ್ಮಯ್ಯ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ ಉಲ್ಲಂಘಿಸಿ ₹ 17 ಕೋಟಿ ವೆಚ್ಚದ ಜಾಗೃತಿ ಕಾರ್ಯಕ್ರಮಕ್ಕೆ ಅನುಮೋದನೆ ನೀಡಿದ್ದು, ಅವ್ಯವಹಾರ ನಡೆದಿದೆ’ ಎಂದು ಆರೋಪಿಸಿ ಮಂಡಳಿಯ ಪ್ರಭಾರ ಸದಸ್ಯ ಕಾರ್ಯದರ್ಶಿಯಾಗಿದ್ದ ಸೂರಿ ಪಾಯಲ, ಮುಖ್ಯಮಂತ್ರಿ ಕಚೇರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಪಿ.ಆರ್. ರಮೇಶ್ ಕೂಡ ಪತ್ರ ಬರೆದಿದ್ದರು.