ಪ್ರಧಾನಿ ಆತಿಥ್ಯದ ಬಿಲ್ನ ಬಾಕಿ ಮೊತ್ತ ಪಾವತಿಸುವಂತೆ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ ಆಡಳಿತವು ನೋಟಿಸ್ ನೀಡಿರುವ ಕುರಿತು ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಅತಿಗಣ್ಯ ವ್ಯಕ್ತಿಗಳು ರಾಜ್ಯಕ್ಕೆ ಬಂದಾಗ ರಾಜ್ಯ ಸರ್ಕಾರವೇ ಆತಿಥ್ಯ ವೆಚ್ಚ ಭರಿಸುತ್ತದೆ. ಅದೇ ಮಾದರಿಯಲ್ಲಿ ಈ ವೆಚ್ಚವನ್ನೂ ಪಾವತಿಸಲಾಗುವುದು’ ಎಂದರು.