‘ಕೇಂದ್ರ ಸರ್ಕಾರದ ಆಡಳಿತದಲ್ಲಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗೆ ಮಾತ್ರ ಆದ್ಯತೆ ಎಂದರೆ ಅದನ್ನು ಒಪ್ಪಲು ಸಾಧ್ಯವಿಲ್ಲ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಹಿಂದಿಯೇತರ ಭಾಷಿಗರು ಇರುವ ರಾಜ್ಯಗಳಲ್ಲಿ ಅಲ್ಲಿನ ಮಾತೃಭಾಷೆಗೆ ಸ್ಥಾನ ನೀಡಬೇಕು. ಅದೇ ರೀತಿ, ಇಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಿಗೆ ಭೂಮಿ, ನೀರನ್ನು ನೀಡಲಾಗಿದೆ. ಹಾಗಾಗಿ, ಕೇಂದ್ರ ಸರ್ಕಾರದ ಯಾವುದೇ ಕಚೇರಿ ಇಲ್ಲಿ ಪ್ರಾರಂಭವಾದರೂ ರಾಜ್ಯ ಭಾಷೆಗೆ ಮೊದಲ ಸ್ಥಾನ ನೀಡಬೇಕು. ಅಧಿಕಾರಕ್ಕಾಗಿ ಇಲ್ಲಿನ ರಾಜಕಾರಣಿಗಳು ರಾಜ್ಯವನ್ನು ವಿಂಗಡಿಸುವ ಮಾತುಗಳನ್ನು ಆಡುತ್ತಿರುವುದು ಖಂಡನೀಯ’ ಎಂದು ಬೇಸರ ವ್ಯಕ್ತಪಡಿಸಿದರು.