ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏ.21ರಂದು ರಾಜ್ಯ ಮಟ್ಟದ ನಾಟಕ ಸ್ಪರ್ಧೆ

Last Updated 13 ಮಾರ್ಚ್ 2019, 19:51 IST
ಅಕ್ಷರ ಗಾತ್ರ

ಬೆಂಗಳೂರು: ಕಾರ್ಮೆಲ್‌ ಮಾತೆಯ ಚರ್ಚ್‌ ವತಿಯಿಂದ ಏಪ್ರಿಲ್‌ 21ರಂದು ತಟ್ಟಗುಪ್ಪೆಯಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧರ್ಮಗುರು ಎ.ಥಾಮಸ್‌, ‘ನಾಟಕ ತಂಡಗಳಿಗೆ ಪ್ರೋತ್ಸಾಹ ನೀಡಲುರಾಜ್ಯ ಮಟ್ಟದ ನಾಟಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ವಿಜೇತ ತಂಡಕ್ಕೆ ₹50 ಸಾವಿರ ಮತ್ತು ಫಲಕ ಹಾಗೂ ಎರಡನೇ ಸ್ಥಾನ ಪಡೆಯುವ ತಂಡಕ್ಕೆ ₹40 ಸಾವಿರ ಮತ್ತು ಫಲಕವನ್ನು ಬಹುಮಾನವಾಗಿ ನೀಡಲಾಗುವುದು’ ಎಂದರು.

‘ನಾಟಕ ತಂಡಗಳು ₹1,000 ನೀಡಿ ಇದೇ 30ರ ಒಳಗೆ ನೋಂದಣಿ ಮಾಡಿಸಿಕೊಳ್ಳಬಹುದು. ತಟ್ಟಗುಪ್ಪೆಯಕಾರ್ಮೆಲ್‌ ಮಾತೆಯ ಚರ್ಚ್‌,ರವೀಂದ್ರ ಕಲಾಕ್ಷೇತ್ರದ ಹತ್ತಿರ ಇರುವ ಕ್ಯಾಂಟೀನ್‌, ಟೌನ್‌ ಹಾಲ್‌ಕ್ಯಾಂಟಿನ್‌ ಮತ್ತು ಬೇಗೂರಿನ ವಾಸು ಎಂಬುವರರಲ್ಲಿ ನೋಂದಣಿ ಅರ್ಜಿ ದೊರೆಯುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT