‘ಅಭಿವೃದ್ಧಿ ಕೆಲಸ ಮಾಡಿಯೂ ಸೋತೆ’
ಉತ್ತರ ಕನ್ನಡ ಜಿಲ್ಲೆಯ ಸಂಸದೆಯಾಗಿದ್ದಾಗ ಐದು ವರ್ಷಗಳಲ್ಲಿ ₹10 ಸಾವಿರ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೆ. ವಿಶ್ವಬ್ಯಾಂಕ್, ಏಷ್ಯಾ ಅಭಿವೃದ್ಧಿ ಬ್ಯಾಂಕ್, ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಸೇರಿದಂತೆ ವಿವಿಧ ಯೋಜನೆಗಳ ಅನುದಾನವನ್ನು ಜಿಲ್ಲೆಯ ಅಭಿವೃದ್ಧಿಗೆ ವಿನಿಯೋಗಿಸಿದರೂ, 2004ರ ಚುನಾವಣೆಯಲ್ಲಿ ಪರಾಭವಗೊಂಡೆ. ಸಾಯುವವರೆಗೆ ಈ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಬಾರದು ಎಂದೆನಿಸಿಬಿಟ್ಟಿತು’ ಎಂದು ಮಾರ್ಗರೇಟ್ ಆಳ್ವ ಹೇಳಿದರು.