ಶೀಘ್ರ ಮನೆ ನಿರ್ಮಿಸಿ: ಬೀದಿಗೆ ಬಿದ್ದಿರುವ ಪ್ರವಾಹ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಂಡು, ಮನೆ ಕಳೆದುಕೊಂಡವರಿಗೆ ₹5 ಲಕ್ಷ ಮೊತ್ತದಲ್ಲಿ ಮನೆ ನಿರ್ಮಿಸಿಕೊಡಬೇಕು. ಅಲ್ಲಿಯವರೆಗೂ ಮನೆ ಬಾಡಿಗೆ ಮೊತ್ತವಾಗಿ ಪ್ರತಿ ಕುಟುಂಬಕ್ಕೆ ₹5 ಸಾವಿರ ನೀಡಬೇಕು ಎಂದು ಶಾಸಕ ಡಿ.ಕೆ. ಶಿವಕುಮಾರ ಬುಧವಾರ ಬೆಂಗಳೂರಿನಲ್ಲಿ ಆಗ್ರಹಿಸಿದರು.