<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಕ್ಷಯರೋಗ ನಿವಾರಣಾ ಸಂಸ್ಥೆಯು ಸಮರ್ಪಕವಾಗಿ ಕಾರ್ಯಾಚರಣೆ ನಡೆಸದ ಕಾರಣ, ಆರೋಗ್ಯ ಇಲಾಖೆಯ ಕ್ಷಯರೋಗ ವಿಭಾಗದಲ್ಲಿ ವಿಲೀನ ಮಾಡಿ ಆದೇಶ ಹೊರಡಿಸಲಾಗಿದೆ. </p>.<p>2024ರ ಡಿಸೆಂಬರ್ನಲ್ಲಿ ನಡೆದ ಸಂಸ್ಥೆಯ ವಿಶೇಷ ಸರ್ವಸದಸ್ಯರ ಸಭೆಯಲ್ಲಿಯೇ ವಿಲೀನಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ವಿಲೀನ ಮಾಡಲಾಗಿದ್ದು, ಸಂಸ್ಥೆಯ ಆಸ್ತಿ, ಹೊಣೆಗಾರಿಕೆ ಮತ್ತು ಕೆಲಸಗಳನ್ನು ಇಲಾಖೆಯ ಕ್ಷಯರೋಗ ವಿಭಾಗ ನಿರ್ವಹಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಘೋಷಾ ಆಸ್ಪತ್ರೆಯ ಹಿಂಭಾಗದಲ್ಲಿ 40x60 ಚದರ ಅಡಿ ನಿವೇಶನದಲ್ಲಿ ಸಂಸ್ಥೆಯ ಕಟ್ಟಡವಿದೆ. ಎದೆ ಮತ್ತು ಶ್ವಾಸಕೋಶದ ಆರೋಗ್ಯದ ಮೇಲೆ ಗಮನಹರಿಸುವ ಆರೋಗ್ಯ ಸೌಲಭ್ಯಕ್ಕೆ ಈ ಕಟ್ಟಡವನ್ನು ಉಳಿಸಿಕೊಂಡು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲು ಕ್ರಮಕೈಗೊಳ್ಳಬೇಕು ಎಂದು ಹೇಳಲಾಗಿದೆ. </p>.<p>ಸಂಸ್ಥೆಯು ಸುಮಾರು ₹ 98 ಲಕ್ಷ ಸ್ಥಿರ ಠೇವಣಿ ಮೊತ್ತವನ್ನು ಹೊಂದಿದ್ದು, ಅದನ್ನು ಬಾಕಿ ವೇತನ ಮತ್ತು ಪಿಂಚಣಿ ಪಾವತಿ, ಕಟ್ಟಡದ ನವೀಕರಣ ಹಾಗೂ ಉಪಕರಣಗಳ ಪೂರೈಕೆಗೆ ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ರಾಜ್ಯ ಕ್ಷಯರೋಗ ನಿವಾರಣಾ ಸಂಸ್ಥೆಯು ಸಮರ್ಪಕವಾಗಿ ಕಾರ್ಯಾಚರಣೆ ನಡೆಸದ ಕಾರಣ, ಆರೋಗ್ಯ ಇಲಾಖೆಯ ಕ್ಷಯರೋಗ ವಿಭಾಗದಲ್ಲಿ ವಿಲೀನ ಮಾಡಿ ಆದೇಶ ಹೊರಡಿಸಲಾಗಿದೆ. </p>.<p>2024ರ ಡಿಸೆಂಬರ್ನಲ್ಲಿ ನಡೆದ ಸಂಸ್ಥೆಯ ವಿಶೇಷ ಸರ್ವಸದಸ್ಯರ ಸಭೆಯಲ್ಲಿಯೇ ವಿಲೀನಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ವಿಲೀನ ಮಾಡಲಾಗಿದ್ದು, ಸಂಸ್ಥೆಯ ಆಸ್ತಿ, ಹೊಣೆಗಾರಿಕೆ ಮತ್ತು ಕೆಲಸಗಳನ್ನು ಇಲಾಖೆಯ ಕ್ಷಯರೋಗ ವಿಭಾಗ ನಿರ್ವಹಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p>ಘೋಷಾ ಆಸ್ಪತ್ರೆಯ ಹಿಂಭಾಗದಲ್ಲಿ 40x60 ಚದರ ಅಡಿ ನಿವೇಶನದಲ್ಲಿ ಸಂಸ್ಥೆಯ ಕಟ್ಟಡವಿದೆ. ಎದೆ ಮತ್ತು ಶ್ವಾಸಕೋಶದ ಆರೋಗ್ಯದ ಮೇಲೆ ಗಮನಹರಿಸುವ ಆರೋಗ್ಯ ಸೌಲಭ್ಯಕ್ಕೆ ಈ ಕಟ್ಟಡವನ್ನು ಉಳಿಸಿಕೊಂಡು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲು ಕ್ರಮಕೈಗೊಳ್ಳಬೇಕು ಎಂದು ಹೇಳಲಾಗಿದೆ. </p>.<p>ಸಂಸ್ಥೆಯು ಸುಮಾರು ₹ 98 ಲಕ್ಷ ಸ್ಥಿರ ಠೇವಣಿ ಮೊತ್ತವನ್ನು ಹೊಂದಿದ್ದು, ಅದನ್ನು ಬಾಕಿ ವೇತನ ಮತ್ತು ಪಿಂಚಣಿ ಪಾವತಿ, ಕಟ್ಟಡದ ನವೀಕರಣ ಹಾಗೂ ಉಪಕರಣಗಳ ಪೂರೈಕೆಗೆ ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>