<p><strong>ಬೆಂಗಳೂರು: </strong>ರಾತ್ರಿಪಾಳಿ ಭತ್ಯೆ ರದ್ದುಗೊಳಿಸಿರುವುದನ್ನು ಖಂಡಿಸಿ ರೈಲ್ವೆ ಇಲಾಖೆ ಸ್ಟೇಷನ್ ಮಾಸ್ಟರ್ಗಳು ನಗರದ ರೈಲ್ವೆ ವಿಭಾಗೀಯ ಕಚೇರಿ ಆವರಣದಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.</p>.<p>ಅಖಿಲ ಭಾರತ ಸ್ಟೇಷನ್ ಮಾಸ್ಟರ್ಗಳ ಸಂಘ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿತ್ತು. ‘ಸ್ಟೇಷನ್ ಮಾಸ್ಟರ್ಗಳು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಾರೆ. ಈಗ ಏಕಾಏಕಿ ರಾತ್ರಿಪಾಳಿಯಲ್ಲಿ ಕಾರ್ಯನಿರ್ವಹಿಸುವ ಸ್ಟೇಷನ್ ಮಾಸ್ಟರ್ಗಳಿಗೆ ನೀಡುವ ಭತ್ಯೆಗೆ ಕತ್ತರಿ ಹಾಕಲಾಗಿದೆ’ ಎಂದು ಉಪವಾಸನಿರತರು ಆರೋಪಿಸಿದರು.</p>.<p>‘ಕೇಂದ್ರೀಯ ವೇತನ ಆಯೋಗದ ಶಿಫಾರಸಿನ ಪ್ರಕಾರ ನೌಕರರ ಎಲ್ಲ ರೀತಿಯ ಭತ್ಯೆಗಳೂ ಪರಿಷ್ಕರಣೆಗೊಂಡಿವೆ. ಅದನ್ನು ರೈಲ್ವೆ ಇಲಾಖೆ ಕೂಡ ಅನುಷ್ಠಾನಗೊಳಿಸಿದೆ. ಈ ನಡುವೆ ₹43,600 ಅಥವಾ ಅದಕ್ಕೂ ಕಡಿಮೆ ಮೂಲವೇತನ ಪಡೆಯುವ ಸ್ಟೇಷನ್ ಮಾಸ್ಟರ್ಗಳಿಗೆ ಮಾತ್ರ ರಾತ್ರಿಪಾಳಿ ಭತ್ಯೆ ನೀಡಲು ರೈಲ್ವೆ ಮಂಡಳಿ ತೀರ್ಮಾನ ಕೈಗೊಂಡಿದೆ. ಇದರಿಂದ ಉಳಿದವರು ಭತ್ಯೆಯಿಂದ ವಂಚಿತರಾಗಲಿದ್ದಾರೆ. ಈ ನಿರ್ಧಾರವನ್ನು ಮಂಡಳಿ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಸಂಸದ ಪಿ.ಸಿ. ಮೋಹನ್ ಅವರಿಗೆ ಸಂಘ ಮನವಿ ಸಲ್ಲಿಸಿತು. ಸ್ಟೇಷನ್ ಮಾಸ್ಟರ್ಗಳ ಸಂಘದ ನೈರುತ್ಯ ವಲಯದ ಪ್ರಧಾನ ಕಾರ್ಯದರ್ಶಿ ಬಿ.ಪಿ. ಕುಮಾರಸ್ವಾಾಮಿ, ವಿಭಾಗೀಯ ಕಾರ್ಯದರ್ಶಿ ಅಜಯ್ ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾತ್ರಿಪಾಳಿ ಭತ್ಯೆ ರದ್ದುಗೊಳಿಸಿರುವುದನ್ನು ಖಂಡಿಸಿ ರೈಲ್ವೆ ಇಲಾಖೆ ಸ್ಟೇಷನ್ ಮಾಸ್ಟರ್ಗಳು ನಗರದ ರೈಲ್ವೆ ವಿಭಾಗೀಯ ಕಚೇರಿ ಆವರಣದಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ನಡೆಸಿದರು.</p>.<p>ಅಖಿಲ ಭಾರತ ಸ್ಟೇಷನ್ ಮಾಸ್ಟರ್ಗಳ ಸಂಘ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿತ್ತು. ‘ಸ್ಟೇಷನ್ ಮಾಸ್ಟರ್ಗಳು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಾರೆ. ಈಗ ಏಕಾಏಕಿ ರಾತ್ರಿಪಾಳಿಯಲ್ಲಿ ಕಾರ್ಯನಿರ್ವಹಿಸುವ ಸ್ಟೇಷನ್ ಮಾಸ್ಟರ್ಗಳಿಗೆ ನೀಡುವ ಭತ್ಯೆಗೆ ಕತ್ತರಿ ಹಾಕಲಾಗಿದೆ’ ಎಂದು ಉಪವಾಸನಿರತರು ಆರೋಪಿಸಿದರು.</p>.<p>‘ಕೇಂದ್ರೀಯ ವೇತನ ಆಯೋಗದ ಶಿಫಾರಸಿನ ಪ್ರಕಾರ ನೌಕರರ ಎಲ್ಲ ರೀತಿಯ ಭತ್ಯೆಗಳೂ ಪರಿಷ್ಕರಣೆಗೊಂಡಿವೆ. ಅದನ್ನು ರೈಲ್ವೆ ಇಲಾಖೆ ಕೂಡ ಅನುಷ್ಠಾನಗೊಳಿಸಿದೆ. ಈ ನಡುವೆ ₹43,600 ಅಥವಾ ಅದಕ್ಕೂ ಕಡಿಮೆ ಮೂಲವೇತನ ಪಡೆಯುವ ಸ್ಟೇಷನ್ ಮಾಸ್ಟರ್ಗಳಿಗೆ ಮಾತ್ರ ರಾತ್ರಿಪಾಳಿ ಭತ್ಯೆ ನೀಡಲು ರೈಲ್ವೆ ಮಂಡಳಿ ತೀರ್ಮಾನ ಕೈಗೊಂಡಿದೆ. ಇದರಿಂದ ಉಳಿದವರು ಭತ್ಯೆಯಿಂದ ವಂಚಿತರಾಗಲಿದ್ದಾರೆ. ಈ ನಿರ್ಧಾರವನ್ನು ಮಂಡಳಿ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಸಂಸದ ಪಿ.ಸಿ. ಮೋಹನ್ ಅವರಿಗೆ ಸಂಘ ಮನವಿ ಸಲ್ಲಿಸಿತು. ಸ್ಟೇಷನ್ ಮಾಸ್ಟರ್ಗಳ ಸಂಘದ ನೈರುತ್ಯ ವಲಯದ ಪ್ರಧಾನ ಕಾರ್ಯದರ್ಶಿ ಬಿ.ಪಿ. ಕುಮಾರಸ್ವಾಾಮಿ, ವಿಭಾಗೀಯ ಕಾರ್ಯದರ್ಶಿ ಅಜಯ್ ಪ್ರಸಾದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>