<p><strong>ಬೆಂಗಳೂರು:</strong> ಬೆಂಗಳೂರು ವಿಶ್ವವಿದ್ಯಾಲಯದ ವಿಗ್ರಹ ವಿವಾದ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ.</p>.<p>ರಾತ್ರೋ ರಾತ್ರಿ ಬುದ್ಧನ ವಿಗ್ರಹ ತಂದು ಪ್ರತಿಷ್ಠಾಪಿಸಿದ ಬಳಿಕ ಈಗ ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸಮುದಾಯಗಳ ನೌಕರರ ಸಂಘಟನೆಗಳು ತಮ್ಮ ಸಮುದಾಯಗಳಿಗೆ ಸೇರಿದ ಮಹಾನ್ ವ್ಯಕ್ತಿಗಳ ವಿಗ್ರಹಗಳನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಗ್ರಹಿಸಿವೆ.</p>.<p>ವಿಶ್ವವಿದ್ಯಾಲಯದಲ್ಲಿರುವ ಅಲ್ಪಸಂಖ್ಯಾತ, ಇತರ ಹಿಂದುಳಿದ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ನೌಕರರ ಸಂಘಟನೆಗಳು ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನಾಡಪ್ರಭು ಕೆಂಪೇಗೌಡ ಮತ್ತು ಮಹಾತ್ಮಗಾಂಧಿ ಪ್ರತಿಮೆಗಳನ್ನು ಸರಸ್ವತಿ ಮತ್ತು ಬುದ್ಧ ವಿಗ್ರಹದ ಪಕ್ಕದಲ್ಲೇ ಸ್ಥಾಪಿಸುವಂತೆ ಪಟ್ಟು ಹಿಡಿದಿವೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಸಮಾಜ ಸುಧಾರಕರ ವಿಗ್ರಹಗಳು ಸರಸ್ವತಿ ಮತ್ತು ಬುದ್ಧ ವಿಗ್ರಹದಷ್ಟೇ ಗಾತ್ರ, ತೂಕ, ವೆಚ್ಚ ಮತ್ತು ಅದೇ ರೀತಿಯ ವಸ್ತುಗಳನ್ನು ಬಳಸಬೇಕು ಎಂದೂ ಆಗ್ರಹಿಸಿವೆ. ಈ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯದ ನೌಕರರ ಸಂಘದ ಪದಾಧಿಕಾರಿಗಳು ಸೋಮವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿಗ್ರಹಗಳ ಸ್ಥಾಪನೆಗೆ ಸೂಕ್ತ ನಿರ್ದೇಶನ ನೀಡಬೇಕು ಮನವಿ ಮಾಡಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್.ವೇಣುಗೋಪಾಲ್ ಅವರು, ‘ಈ ಬಗ್ಗೆ ವೈಯಕ್ತಿಕವಾಗಿ ಯಾವುದೇ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರಸ್ತಾವನೆಯನ್ನು ಸಿಂಡಿಕೇಟ್ ಮುಂದಿಡುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ವಿಶ್ವವಿದ್ಯಾಲಯದ ವಿಗ್ರಹ ವಿವಾದ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ.</p>.<p>ರಾತ್ರೋ ರಾತ್ರಿ ಬುದ್ಧನ ವಿಗ್ರಹ ತಂದು ಪ್ರತಿಷ್ಠಾಪಿಸಿದ ಬಳಿಕ ಈಗ ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ ಸಮುದಾಯಗಳ ನೌಕರರ ಸಂಘಟನೆಗಳು ತಮ್ಮ ಸಮುದಾಯಗಳಿಗೆ ಸೇರಿದ ಮಹಾನ್ ವ್ಯಕ್ತಿಗಳ ವಿಗ್ರಹಗಳನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಗ್ರಹಿಸಿವೆ.</p>.<p>ವಿಶ್ವವಿದ್ಯಾಲಯದಲ್ಲಿರುವ ಅಲ್ಪಸಂಖ್ಯಾತ, ಇತರ ಹಿಂದುಳಿದ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ನೌಕರರ ಸಂಘಟನೆಗಳು ಬಸವಣ್ಣ, ಕನಕದಾಸ, ಶಿಶುನಾಳ ಶರೀಫ, ನಾಡಪ್ರಭು ಕೆಂಪೇಗೌಡ ಮತ್ತು ಮಹಾತ್ಮಗಾಂಧಿ ಪ್ರತಿಮೆಗಳನ್ನು ಸರಸ್ವತಿ ಮತ್ತು ಬುದ್ಧ ವಿಗ್ರಹದ ಪಕ್ಕದಲ್ಲೇ ಸ್ಥಾಪಿಸುವಂತೆ ಪಟ್ಟು ಹಿಡಿದಿವೆ ಎಂದು ಮೂಲಗಳು ತಿಳಿಸಿವೆ.</p>.<p>ಈ ಸಮಾಜ ಸುಧಾರಕರ ವಿಗ್ರಹಗಳು ಸರಸ್ವತಿ ಮತ್ತು ಬುದ್ಧ ವಿಗ್ರಹದಷ್ಟೇ ಗಾತ್ರ, ತೂಕ, ವೆಚ್ಚ ಮತ್ತು ಅದೇ ರೀತಿಯ ವಸ್ತುಗಳನ್ನು ಬಳಸಬೇಕು ಎಂದೂ ಆಗ್ರಹಿಸಿವೆ. ಈ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯದ ನೌಕರರ ಸಂಘದ ಪದಾಧಿಕಾರಿಗಳು ಸೋಮವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿಗ್ರಹಗಳ ಸ್ಥಾಪನೆಗೆ ಸೂಕ್ತ ನಿರ್ದೇಶನ ನೀಡಬೇಕು ಮನವಿ ಮಾಡಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಆರ್.ವೇಣುಗೋಪಾಲ್ ಅವರು, ‘ಈ ಬಗ್ಗೆ ವೈಯಕ್ತಿಕವಾಗಿ ಯಾವುದೇ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರಸ್ತಾವನೆಯನ್ನು ಸಿಂಡಿಕೇಟ್ ಮುಂದಿಡುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>