ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ‘ರಾಜ್ಯದ ಎಲ್ಲ ಜಿಲ್ಲೆಗಳಿಂದ ಮೃತ್ತಿಕೆಯನ್ನು ಸಂಗ್ರಹಿಸಿ ಸಕಲ ಗೌರವಗಳೊಂದಿಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಬೆಂಗಳೂರಿನ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿಂದ ಸಹ ಮೃತ್ತಿಕೆಯನ್ನು ಗೌರವಗಳೊಂದಿಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಳುಹಿಸುವ ಅಪರೂಪದ ಕಾರ್ಯಕ್ರಮ ಇದಾಗಿದೆ’ ಎಂದರು.