ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ

Last Updated 21 ಆಗಸ್ಟ್ 2020, 20:46 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ಶೆಟ್ಟಿಹಳ್ಳಿ ವಾರ್ಡ್‌ನ ಪಾಲಿಕೆ ಸದಸ್ಯ ಕೆ. ನಾಗಭೂಷಣ್ ನೇತೃತ್ವದಲ್ಲಿ ರಾಜಣ್ಣ ವೃತ್ತದಲ್ಲಿ ₹2.10 ಕೋಟಿ ವೆಚ್ಚದಲ್ಲಿ ವಾರ್ಡ್ ಕಚೇರಿ ನಿರ್ಮಾಣ ಮಾಡಲಾಗಿದೆ. ₹1 ಕೋಟಿ ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ, ಪಾರ್ಕ್ ಅಭಿವೃದ್ಧಿ ಮಾಡಲಾಗಿದೆ.

ಶುಕ್ರವಾರ ನಡೆದ ಕಾರ್ಯಕ್ರಮ ದಲ್ಲಿ ಕಂದಾಯ ಸಚಿವ ಆರ್. ಅಶೋಕ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಪಾಲಿಕೆ ಸದಸ್ಯ ಕೆ.ನಾಗಭೂಷಣ್, ‘ವಾರ್ಡ್ ವ್ಯಾಪ್ತಿಯಲ್ಲಿ ವಾರ್ಡ್ ಕಚೇರಿ ಇರಲಿಲ್ಲ. ಇದೀಗ ಈ ಕನಸು ಈಡೇರಿದೆ’ ಎಂದರು.

ಶಾಸಕ ಆರ್.ಮಂಜುನಾಥ್, ಮಾಜಿ ಶಾಸಕ ಎಸ್. ಮುನಿರಾಜು, ಮೇಯರ್‌ ಎಂ. ಗೌತಮ್ ಕುಮಾರ್, ಶಾಸಕ ದಿನೇಶ್ ಗುಂಡೂರಾವ್, ಸಮಾಜ ಸೇವಕ ಎಚ್. ಎಂ.ಕೃಷ್ಣಮೂರ್ತಿ, ಕೆಪಿಸಿಸಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT