ವಿಚಾರಣೆ ವೇಳೆ ಬಿಡಿಎ ಪರ ವಾದ ಮಂಡಿಸಿದ ವಕೀಲ ಬಿ.ಎಸ್.ಸಚಿನ್, ‘ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ನಂತರ ಐದು ವರ್ಷಗಳಲ್ಲಿ ಬಡಾವಣೆ ನಿರ್ಮಾಣ ಯೋಜನೆ ಪೂರ್ಣಗೊಳಿಸಿಲ್ಲ ಎಂಬ ಕಾರಣಕ್ಕೆ ಏಕಸದಸ್ಯ ನ್ಯಾಯಪೀಠ ಭೂ ಸ್ವಾಧೀನ ರದ್ದುಗೊಳಿಸಿದೆ. ಆದರೆ, ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ವ್ಯಾಜ್ಯಗಳು ಇತ್ಯರ್ಥವಾಗದ ಕಾರಣ ಯೋಜನೆ ಪೂರ್ಣಗೊಳಿಸಲಾಗಿಲ್ಲ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.