‘ಪತ್ರಕರ್ತರು ದಿನವೂ ಸವಾಲಿನ ನಡುವೆಯೇ ವೃತ್ತಿಜೀವನ ನಡೆಸುತ್ತಿದ್ದಾರೆ. ಪತ್ರಕರ್ತರು ಸಂವಿಧಾನದ ಅಭಿವ್ಯಕ್ತಿ ಸ್ವಾತಂತ್ರ್ಯದ ವಕ್ತಾರರಾಗಿದ್ದಾರೆ. ಇವರು ಬಹಳಷ್ಟು ಸಮಸ್ಯೆ ಎದುರಿಸುತ್ತಿದ್ದು, ಕೆಲವರು ನಿವೇಶನರಹಿತರಾಗಿಯೂ ಇದ್ದಾರೆ. ಪತ್ರಕರ್ತರಿಗೆ ನಿವೇಶನ ಕಲ್ಪಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ನಿವೇಶನರಹಿತ ಪತ್ರಕರ್ತರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿಯ ಜೊತೆ ಸಮಾಲೋಚಿಸಿ, ಶೀಘ್ರವೇ ಕ್ರಮ ತೆಗೆದು
ಕೊಳ್ಳುತ್ತೇನೆ’ ಎಂದರು.