<p><strong>ಬೆಂಗಳೂರು:</strong> ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ₹1.76 ಕೋಟಿ ಮೌಲ್ಯದ ಸ್ವತ್ತುಗಳನ್ನು ಉತ್ತರ ವಿಭಾಗದ ಪೊಲೀಸರು ಶುಕ್ರವಾರ ಮಾಲೀಕರಿಗೆ ಹಸ್ತಾಂತರಿಸಿದರು.</p>.<p>ಮಲ್ಲೇಶ್ವರ ಮೈದಾನದಲ್ಲಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಚಿನ್ನಾಭರಣ, ವಿವಿಧ ಮಾದರಿಯ ವಾಹನಗಳು ಹಾಗೂ ಮೊಬೈಲ್ ಫೋನ್ಗಳನ್ನು ಮಾಲೀಕರಿಗೆ ಹಸ್ತಾಂತರಿಸಿದರು.</p>.<p>ಮಲ್ಲೇಶ್ವರ, ಶ್ರೀರಾಮಪುರ, ರಾಜಾಜಿನಗರ, ಸುಬ್ರಹ್ಮಣ್ಯಪುರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ಯಶವಂತಪುರ, ಆರ್ಎಂಸಿ ಯಾರ್ಡ್, ಜಾಲಹಳ್ಳಿ, ಜೆ.ಸಿ ನಗರ, ಆರ್.ಟಿ ನಗರ, ಸಂಜಯನಗರ, ಹೆಬ್ಬಾಳ ಠಾಣೆಯ ಪೊಲೀಸರು, ಕಳೆದ ಕೆಲವು ತಿಂಗಳಿಂದ ಕಾರ್ಯಾಚರಣೆ ನಡೆಸಿ ಹಲವು ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.</p>.<p>ಆರೋಪಿಗಳಿಂದ ಚಿನ್ನ–ಬೆಳ್ಳಿಯ ಆಭರಣ, ಮೊಬೈಲ್ ಫೋನ್ಗಳು, ಕಾರು, ಬೈಕ್ ಹಾಗೂ ಆಟೊರಿಕ್ಷಾಗಳನ್ನು ವಶ ಪಡಿಸಿಕೊಂಡಿದ್ದರು. ಆ ಸ್ವತ್ತುಗಳನ್ನು ಮಾಲೀಕರಿಗೆ ಶುಕ್ರವಾರ ಹಸ್ತಾಂತರ ಮಾಡಲಾಯಿತು.</p>.<p>ಹಗಲು–ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ, ಮನೆಯ ಎದುರು ಹಾಗೂ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ವಾಹನಗಳ ಕಳ್ಳತನ ಸೇರಿದಂತೆ 75 ಪ್ರಕರಣಗಳನ್ನು ಭೇದಿಸಿ ಒಟ್ಟು 83 ಆರೋಪಿಗಳನ್ನು ಬಂಧಿಸಲಾಗಿದೆ. 1 ಕೆ.ಜಿ 879 ಗ್ರಾಂ ಚಿನ್ನಾಭರಣ, 4 ಗ್ರಾಂ ವಜ್ರದ ಆಭರಣ, 1 ಕೆ.ಜಿ 783 ಗ್ರಾಂ ಬೆಳ್ಳಿಯ ಸಾಮಗ್ರಿ, 54 ದ್ವಿಚಕ್ರ ವಾಹನಗಳು, ಎರಡು ತ್ರಿಚಕ್ರ ವಾಹನಗಳು, ಒಂದು ನಾಲ್ಕು ಚಕ್ರದ ವಾಹನ, ವಿವಿಧ ಕಂಪನಿಯ 67 ಮೊಬೈಲ್ ಫೋನ್ಗಳು, ಒಂದು ಲ್ಯಾಪ್ಟಾಪ್, ಒಂದು ಟಿ.ವಿ, ₹3 ಲಕ್ಷ ನಗದು ಜಪ್ತಿ ಮಾಡಲಾಗಿತ್ತು ಎಂದು ಉತ್ತರ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ತಿಳಿಸಿದರು.</p>.<p>ಉತ್ತರ ವಿಭಾಗದ 13 ಠಾಣೆಗಳ ಪೊಲೀಸರು ಉತ್ತಮ ಕಾರ್ಯಾಚರಣೆ ನಡೆಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಶ್ಲಾಘಿಸಿದರು.</p>.<p>ಕಾರ್ಯಕ್ರಮದಲ್ಲಿ ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಸಿ.ವಂಶಿ ಕೃಷ್ಣ ಹಾಜರಿದ್ದರು. </p>.<div><blockquote>ನಗರದಲ್ಲಿ ಕಳ್ಳತನ ಪ್ರಕರಣಗಳು ತಗ್ಗಿವೆ. ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಕಳ್ಳತನ ಪ್ರಕರಣಗಳು ನಡೆದರೂ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗುತ್ತಿದೆ </blockquote><span class="attribution">ಸೀಮಾಂತ್ಕುಮಾರ್ ಸಿಂಗ್ ನಗರ ಪೊಲೀಸ್ ಕಮಿಷನರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ₹1.76 ಕೋಟಿ ಮೌಲ್ಯದ ಸ್ವತ್ತುಗಳನ್ನು ಉತ್ತರ ವಿಭಾಗದ ಪೊಲೀಸರು ಶುಕ್ರವಾರ ಮಾಲೀಕರಿಗೆ ಹಸ್ತಾಂತರಿಸಿದರು.</p>.<p>ಮಲ್ಲೇಶ್ವರ ಮೈದಾನದಲ್ಲಿ ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಚಿನ್ನಾಭರಣ, ವಿವಿಧ ಮಾದರಿಯ ವಾಹನಗಳು ಹಾಗೂ ಮೊಬೈಲ್ ಫೋನ್ಗಳನ್ನು ಮಾಲೀಕರಿಗೆ ಹಸ್ತಾಂತರಿಸಿದರು.</p>.<p>ಮಲ್ಲೇಶ್ವರ, ಶ್ರೀರಾಮಪುರ, ರಾಜಾಜಿನಗರ, ಸುಬ್ರಹ್ಮಣ್ಯಪುರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ಯಶವಂತಪುರ, ಆರ್ಎಂಸಿ ಯಾರ್ಡ್, ಜಾಲಹಳ್ಳಿ, ಜೆ.ಸಿ ನಗರ, ಆರ್.ಟಿ ನಗರ, ಸಂಜಯನಗರ, ಹೆಬ್ಬಾಳ ಠಾಣೆಯ ಪೊಲೀಸರು, ಕಳೆದ ಕೆಲವು ತಿಂಗಳಿಂದ ಕಾರ್ಯಾಚರಣೆ ನಡೆಸಿ ಹಲವು ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.</p>.<p>ಆರೋಪಿಗಳಿಂದ ಚಿನ್ನ–ಬೆಳ್ಳಿಯ ಆಭರಣ, ಮೊಬೈಲ್ ಫೋನ್ಗಳು, ಕಾರು, ಬೈಕ್ ಹಾಗೂ ಆಟೊರಿಕ್ಷಾಗಳನ್ನು ವಶ ಪಡಿಸಿಕೊಂಡಿದ್ದರು. ಆ ಸ್ವತ್ತುಗಳನ್ನು ಮಾಲೀಕರಿಗೆ ಶುಕ್ರವಾರ ಹಸ್ತಾಂತರ ಮಾಡಲಾಯಿತು.</p>.<p>ಹಗಲು–ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ, ಮನೆಯ ಎದುರು ಹಾಗೂ ರಸ್ತೆಯ ಬದಿಯಲ್ಲಿ ನಿಲುಗಡೆ ಮಾಡಿದ್ದ ವಾಹನಗಳ ಕಳ್ಳತನ ಸೇರಿದಂತೆ 75 ಪ್ರಕರಣಗಳನ್ನು ಭೇದಿಸಿ ಒಟ್ಟು 83 ಆರೋಪಿಗಳನ್ನು ಬಂಧಿಸಲಾಗಿದೆ. 1 ಕೆ.ಜಿ 879 ಗ್ರಾಂ ಚಿನ್ನಾಭರಣ, 4 ಗ್ರಾಂ ವಜ್ರದ ಆಭರಣ, 1 ಕೆ.ಜಿ 783 ಗ್ರಾಂ ಬೆಳ್ಳಿಯ ಸಾಮಗ್ರಿ, 54 ದ್ವಿಚಕ್ರ ವಾಹನಗಳು, ಎರಡು ತ್ರಿಚಕ್ರ ವಾಹನಗಳು, ಒಂದು ನಾಲ್ಕು ಚಕ್ರದ ವಾಹನ, ವಿವಿಧ ಕಂಪನಿಯ 67 ಮೊಬೈಲ್ ಫೋನ್ಗಳು, ಒಂದು ಲ್ಯಾಪ್ಟಾಪ್, ಒಂದು ಟಿ.ವಿ, ₹3 ಲಕ್ಷ ನಗದು ಜಪ್ತಿ ಮಾಡಲಾಗಿತ್ತು ಎಂದು ಉತ್ತರ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ತಿಳಿಸಿದರು.</p>.<p>ಉತ್ತರ ವಿಭಾಗದ 13 ಠಾಣೆಗಳ ಪೊಲೀಸರು ಉತ್ತಮ ಕಾರ್ಯಾಚರಣೆ ನಡೆಸಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಶ್ಲಾಘಿಸಿದರು.</p>.<p>ಕಾರ್ಯಕ್ರಮದಲ್ಲಿ ಪಶ್ಚಿಮ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಸಿ.ವಂಶಿ ಕೃಷ್ಣ ಹಾಜರಿದ್ದರು. </p>.<div><blockquote>ನಗರದಲ್ಲಿ ಕಳ್ಳತನ ಪ್ರಕರಣಗಳು ತಗ್ಗಿವೆ. ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಕಳ್ಳತನ ಪ್ರಕರಣಗಳು ನಡೆದರೂ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಗುತ್ತಿದೆ </blockquote><span class="attribution">ಸೀಮಾಂತ್ಕುಮಾರ್ ಸಿಂಗ್ ನಗರ ಪೊಲೀಸ್ ಕಮಿಷನರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>