‘ಭಾರತವು ಮೊದಲಿನಿಂದಲೂ ವೈವಿಧ್ಯತೆಯಲ್ಲಿ ಏಕತೆ ಎಂಬ ತತ್ವ ಅನುಸರಿಸುತ್ತಿದೆ. ಅದರಂತೆ ಕೇಂದ್ರ ಸರ್ಕಾರವು ಎಲ್ಲ ಪ್ರಾದೇಶಿಕ ಭಾಷೆಗಳನ್ನೂ ಗೌರವಿಸಬೇಕು. ಆದರೆ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಿಂದಿಯೇತರ ರಾಜ್ಯಗಳ ಮೇಲೆ ಬಲವಂತವಾಗಿ ಭಾಷೆಯನ್ನು ಹೇರಿಕೆ ಮಾಡುತ್ತಿದ್ದಾರೆ. ಸಾರ್ವಜನಿಕ ವಲಯದ ಕೈಗಾರಿಕೆಗಳಲ್ಲಿಯೂ ಕೇಂದ್ರ ಸರ್ಕಾರವು ಒತ್ತಾಯದಿಂದ ನಡೆಸುತ್ತಿರುವ ಹಿಂದಿ ಸಪ್ತಾಹದ ಆಚರಣೆಯೇ ಇದಕ್ಕೆ ಸಾಕ್ಷಿ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.