ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಪತ್ನಿ ಸಮೇತ ತಡರಾತ್ರಿ 2.30ರ ಸುಮಾರಿಗೆ ಸ್ಥಳಕ್ಕೆ ಬಂದಿದ್ದರು. ಇಬ್ಬರೂ ಸೇರಿ ಅರುಣ್ ಅವರ ಜೊತೆ ಮಾತುಕತೆ ನಡೆಸಿದರು. ‘ಮನೆ ಮುಂದೆ ಕುಳಿತುಕೊಳ್ಳುವುದು ಸರಿ ಅನ್ನಿಸುವುದಿಲ್ಲ. ಮಗಳನ್ನು ನೋಡಲು ನಾವೇ ಅವಕಾಶ ಮಾಡಿಕೊಡಿಸುತ್ತೇವೆ. ಸದ್ಯ ಇಲ್ಲಿಂದ ಎದ್ದೇಳಿ’ ಎಂದು ಕೋರಿದರು. ಅದಕ್ಕೆ ಒಪ್ಪಿದ ಅರುಣ್ ಧರಣಿ ಕೈಬಿಟ್ಟು ಗುಳೇದ್ ಜೊತೆ ಸ್ಥಳದಿಂದ ತೆರಳಿದರು.