ಪುಸ್ತಕ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಟ್ಸ್ಆ್ಯಪ್ ಫೇಸ್ಬುಕ್ ಬಂದ ಬಳಿಕ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಯಿತು ಎಂಬ ಭಾವನೆ ಇತ್ತು. ಆದರೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಪುಸ್ತಕ ಪ್ರೇಮಿಗಳು ಭೇಟಿ ನೀಡುತ್ತಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಅವರು ಒಳ್ಳೆಯ ಪ್ರಯತ್ನ ಮಾಡಿದ್ದಾರೆ.
ಡಿ.ನಿಂಗರಾಜ್, ಚಿಂತನ ಚಿತ್ತಾರ ಪ್ರಕಾಶಕ
ಸಾಹಿತ್ಯ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗೆ ಭೇಟಿ ನೀಡುತ್ತಿದ್ದಾರೆ. ಒಳ್ಳೆಯ ವ್ಯಾಪಾರವಾಗುತ್ತಿದೆ. ಆದರೆ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ₹2 ಲಕ್ಷದವರೆಗೂ ಪುಸ್ತಕಗಳನ್ನು ಖರೀದಿಸುವ ಅವಕಾಶವಿದ್ದರೂ ಶಾಸಕರು ಯಾರೂ ಪುಸ್ತಕ ಖರೀದಿಸಲು ಬಂದಿಲ್ಲ. ಪುಸ್ತಕಗಳನ್ನು ಖರೀದಿಸಿ ಸರ್ಕಾರಿ ಶಾಲೆ ಗ್ರಂಥಾಲಯಕ್ಕೆ ನೀಡಬಹುದು.
ಬಸವರಾಜ ಸೂಳಿಭಾವಿ, ಲಡಾಯಿ ಪ್ರಕಾಶನ
ಮಳಿಗೆಗೆ ಶಾಸಕರು ಭೇಟಿ ನೀಡಿ ಹೋದರು. ನಂತರ ಯಾರೂ ಬಂದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಪುಸ್ತಕಗಳನ್ನು ವಿದ್ಯಾರ್ಥಿಗಳು ಖರೀದಿಸುತ್ತಿದ್ದಾರೆ. ಕನ್ನಡ ಇಂಗ್ಲಿಷ್ ಹಿಂದಿ ಪುಸ್ತಕಗಳು ಲಭ್ಯ ಇವೆ.
ಸುಮನಾ, ಪ್ರಕಾಶಕಿ, ನ್ಯಾಷನಲ್ ಬುಕ್ ಹೌಸ್
ವಿಧಾನಸೌಧದ ಆವರಣದೊಳಗೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಿರುವುದು ಖುಷಿಯಾಗಿದೆ. ಕಲೆ ಸಾಹಿತ್ಯ ಸಂಸ್ಕೃತಿ ವಿಜ್ಞಾನ ವಿಷಯದ ಪುಸ್ತಕಗಳು ಮೇಳದಲ್ಲಿ ಲಭ್ಯವಿವೆ. ನಮಗೆ ಇಷ್ಟದ ಲೇಖಕರ ಪುಸ್ತಕಗಳನ್ನು ಕೊಂಡುಕೊಳ್ಳಬಹುದು. –
ನೇತ್ರಾಲಕ್ಷ್ಮೀ, ವಿದ್ಯಾರ್ಥಿನಿ, ಸರ್ಕಾರಿ ಕಲಾ ಕಾಲೇಜು ಬೆಂಗಳೂರು
ಪುಸ್ತಕ ಮೇಳದಲ್ಲಿ ಸಾಹಿತ್ಯ ಪ್ರಿಯರು ಪುಸ್ತಕಗಳನ್ನು ಖರೀದಿಸಿದರು. ಪ್ರಜಾವಾಣಿ ಚಿತ್ರ: ಎಂ. ಎಸ್. ಮಂಜುನಾಥ್