<p><strong>ಬೆಂಗಳೂರು:</strong> ಬೀದಿ ನಾಯಿಗಳಿಗೆ ಆಶ್ರಯತಾಣ ನಿರ್ಮಿಸಲು ಕೇಂದ್ರ ನಿರಾಶ್ರಿತರ ಸಮಿತಿ, ಜ್ಞಾನಭಾರತಿ ಆವರಣ, ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಆವರಣಗಳಲ್ಲಿ ಸ್ಥಳ ಗುರುತಿಸಲಾಗಿದೆ. ಆ ಸ್ಥಳಗಳನ್ನು ಹಸ್ತಾಂತರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ. ತಿಳಿಸಿದರು.</p>.<p>ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಕಲ್ಯಾಣ ಸಂಸ್ಥೆಗಳ ಜೊತೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸುಪ್ರೀಂ ಕೋರ್ಟ್ ಆದೇಶದ ಅನ್ವಯ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,352 ಸಂಸ್ಥೆಗಳನ್ನು ಗುರುತಿಸಿದ್ದು, ಅದರಲ್ಲಿ ಈಗಾಗಲೇ 209 ಸಂಸ್ಥೆಗಳು ತಮ್ಮ ಮಾಹಿತಿಗಳನ್ನು ನೀಡಿವೆ. ನಗರದಲ್ಲಿ ಮಾನವ – ಪ್ರಾಣಿ ಸಂಘರ್ಷ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದ ಅವರು, ಪ್ರಾಣಿ ಕಲ್ಯಾಣ ಸಂಸ್ಥೆಗಳ ಸಹಕಾರವನ್ನು ಪಡೆಯಬೇಕು ಎಂದು ತಿಳಿಸಿದರು.</p>.<p>13 ಪ್ರಾಣಿ ಕಲ್ಯಾಣ ಸಂಸ್ಥೆಗಳು, 3 ಎಬಿಸಿ – ಎಆರ್ವಿ ಸೇವಾದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಿದರು.</p>.<p>ಕಂದಾಯ ವಿಭಾಗದ ಹೆಚ್ಚುವರಿ ಆಯುಕ್ತ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತ ಸಂಗಪ್ಪ, ಆರತಿ ಆನಂದ್, ಮುಖ್ಯ ಎಂಜಿನಿಯರ್ ಸ್ವಯಂಪ್ರಭ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೀದಿ ನಾಯಿಗಳಿಗೆ ಆಶ್ರಯತಾಣ ನಿರ್ಮಿಸಲು ಕೇಂದ್ರ ನಿರಾಶ್ರಿತರ ಸಮಿತಿ, ಜ್ಞಾನಭಾರತಿ ಆವರಣ, ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಆವರಣಗಳಲ್ಲಿ ಸ್ಥಳ ಗುರುತಿಸಲಾಗಿದೆ. ಆ ಸ್ಥಳಗಳನ್ನು ಹಸ್ತಾಂತರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ. ತಿಳಿಸಿದರು.</p>.<p>ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಕಲ್ಯಾಣ ಸಂಸ್ಥೆಗಳ ಜೊತೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸುಪ್ರೀಂ ಕೋರ್ಟ್ ಆದೇಶದ ಅನ್ವಯ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,352 ಸಂಸ್ಥೆಗಳನ್ನು ಗುರುತಿಸಿದ್ದು, ಅದರಲ್ಲಿ ಈಗಾಗಲೇ 209 ಸಂಸ್ಥೆಗಳು ತಮ್ಮ ಮಾಹಿತಿಗಳನ್ನು ನೀಡಿವೆ. ನಗರದಲ್ಲಿ ಮಾನವ – ಪ್ರಾಣಿ ಸಂಘರ್ಷ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದ ಅವರು, ಪ್ರಾಣಿ ಕಲ್ಯಾಣ ಸಂಸ್ಥೆಗಳ ಸಹಕಾರವನ್ನು ಪಡೆಯಬೇಕು ಎಂದು ತಿಳಿಸಿದರು.</p>.<p>13 ಪ್ರಾಣಿ ಕಲ್ಯಾಣ ಸಂಸ್ಥೆಗಳು, 3 ಎಬಿಸಿ – ಎಆರ್ವಿ ಸೇವಾದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಿದರು.</p>.<p>ಕಂದಾಯ ವಿಭಾಗದ ಹೆಚ್ಚುವರಿ ಆಯುಕ್ತ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತ ಸಂಗಪ್ಪ, ಆರತಿ ಆನಂದ್, ಮುಖ್ಯ ಎಂಜಿನಿಯರ್ ಸ್ವಯಂಪ್ರಭ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>