<p><strong>ಬೆಂಗಳೂರು:</strong> ಬೀದಿ ನಾಯಿಗಳಿಗೆ ಆಶ್ರಯತಾಣ ನಿರ್ಮಿಸಲು ಕೇಂದ್ರ ನಿರಾಶ್ರಿತರ ಸಮಿತಿ, ಜ್ಞಾನಭಾರತಿ ಆವರಣ, ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಆವರಣಗಳಲ್ಲಿ ಸ್ಥಳ ಗುರುತಿಸಲಾಗಿದೆ. ಆ ಸ್ಥಳಗಳನ್ನು ಹಸ್ತಾಂತರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ. ತಿಳಿಸಿದರು.</p>.<p>ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಕಲ್ಯಾಣ ಸಂಸ್ಥೆಗಳ ಜೊತೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸುಪ್ರೀಂ ಕೋರ್ಟ್ ಆದೇಶದ ಅನ್ವಯ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,352 ಸಂಸ್ಥೆಗಳನ್ನು ಗುರುತಿಸಿದ್ದು, ಅದರಲ್ಲಿ ಈಗಾಗಲೇ 209 ಸಂಸ್ಥೆಗಳು ತಮ್ಮ ಮಾಹಿತಿಗಳನ್ನು ನೀಡಿವೆ. ನಗರದಲ್ಲಿ ಮಾನವ – ಪ್ರಾಣಿ ಸಂಘರ್ಷ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದ ಅವರು, ಪ್ರಾಣಿ ಕಲ್ಯಾಣ ಸಂಸ್ಥೆಗಳ ಸಹಕಾರವನ್ನು ಪಡೆಯಬೇಕು ಎಂದು ತಿಳಿಸಿದರು.</p>.<p>13 ಪ್ರಾಣಿ ಕಲ್ಯಾಣ ಸಂಸ್ಥೆಗಳು, 3 ಎಬಿಸಿ – ಎಆರ್ವಿ ಸೇವಾದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಿದರು.</p>.<p>ಕಂದಾಯ ವಿಭಾಗದ ಹೆಚ್ಚುವರಿ ಆಯುಕ್ತ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತ ಸಂಗಪ್ಪ, ಆರತಿ ಆನಂದ್, ಮುಖ್ಯ ಎಂಜಿನಿಯರ್ ಸ್ವಯಂಪ್ರಭ ಉಪಸ್ಥಿತರಿದ್ದರು.</p>
<p><strong>ಬೆಂಗಳೂರು:</strong> ಬೀದಿ ನಾಯಿಗಳಿಗೆ ಆಶ್ರಯತಾಣ ನಿರ್ಮಿಸಲು ಕೇಂದ್ರ ನಿರಾಶ್ರಿತರ ಸಮಿತಿ, ಜ್ಞಾನಭಾರತಿ ಆವರಣ, ಮೈಸೂರು ಲ್ಯಾಂಪ್ಸ್ ಕಾರ್ಖಾನೆ ಆವರಣಗಳಲ್ಲಿ ಸ್ಥಳ ಗುರುತಿಸಲಾಗಿದೆ. ಆ ಸ್ಥಳಗಳನ್ನು ಹಸ್ತಾಂತರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪಶ್ಚಿಮ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಕೆ.ವಿ. ತಿಳಿಸಿದರು.</p>.<p>ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಕಲ್ಯಾಣ ಸಂಸ್ಥೆಗಳ ಜೊತೆಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸುಪ್ರೀಂ ಕೋರ್ಟ್ ಆದೇಶದ ಅನ್ವಯ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,352 ಸಂಸ್ಥೆಗಳನ್ನು ಗುರುತಿಸಿದ್ದು, ಅದರಲ್ಲಿ ಈಗಾಗಲೇ 209 ಸಂಸ್ಥೆಗಳು ತಮ್ಮ ಮಾಹಿತಿಗಳನ್ನು ನೀಡಿವೆ. ನಗರದಲ್ಲಿ ಮಾನವ – ಪ್ರಾಣಿ ಸಂಘರ್ಷ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದ ಅವರು, ಪ್ರಾಣಿ ಕಲ್ಯಾಣ ಸಂಸ್ಥೆಗಳ ಸಹಕಾರವನ್ನು ಪಡೆಯಬೇಕು ಎಂದು ತಿಳಿಸಿದರು.</p>.<p>13 ಪ್ರಾಣಿ ಕಲ್ಯಾಣ ಸಂಸ್ಥೆಗಳು, 3 ಎಬಿಸಿ – ಎಆರ್ವಿ ಸೇವಾದಾರರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಸಲಹೆ ನೀಡಿದರು.</p>.<p>ಕಂದಾಯ ವಿಭಾಗದ ಹೆಚ್ಚುವರಿ ಆಯುಕ್ತ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತ ಸಂಗಪ್ಪ, ಆರತಿ ಆನಂದ್, ಮುಖ್ಯ ಎಂಜಿನಿಯರ್ ಸ್ವಯಂಪ್ರಭ ಉಪಸ್ಥಿತರಿದ್ದರು.</p>