<p><strong>ಬೆಂಗಳೂರು:</strong> ರಸ್ತೆ ಮಧ್ಯದಲ್ಲಿ ನಿಂತು ಜನ್ಮದಿನ ಆಚರಿಸಿಕೊಂಡು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದ ಆರೋಪದ ಅಡಿ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ, ವಿದ್ಯಾರಣ್ಯಪುರದ ನಿವಾಸಿ ಭಕ್ತವತ್ಸ(47) ಎಂಬುವವರನ್ನು ವಿದ್ಯಾರಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿ, ತನ್ನ ಸ್ನೇಹಿತರು ಹಾಗೂ ಕುಟುಂಬ ಸದಸ್ಯರ ಜತೆ ಸೇರಿಕೊಂಡು ಜೂನ್ 12ರಂದು ವಿದ್ಯಾರಣ್ಯಪುರದ ನರಸೀಪುರ ಮುಖ್ಯರಸ್ತೆಯಲ್ಲಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಜನ್ಮದಿನ ಆಚರಿಸಿಕೊಂಡಿದ್ದ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. </p>.<p>‘ಜನ್ಮದಿನಾಚರಣೆಗೆಂದು ಬ್ಯಾನರ್ ಕಟ್ಟಲಾಗಿತ್ತು. ಪಟಾಕಿ ಸಿಡಿಸಲಾಗಿತ್ತು. ಅಲ್ಲದೆ, ಭಕ್ತವತ್ಸಲನನ್ನು ಮೆಚ್ಚಿಸಲು ಕೆಲವು ಬೆಂಬಲಿಗರು, ತಮ್ಮ ಬೈಕ್ಗಳನ್ನು ಸ್ಟಾರ್ಟ್ ಮಾಡಿ, ಮಾರ್ಪಡಿಸಿದ ಸೈಲೆನ್ಸರ್ಗಳ ಮೂಲಕ ಜೋರು ಶಬ್ದ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ಜನ್ಮದಿನ ಆಚರಣೆಯನ್ನು ಆರೋಪಿಯ ಪತ್ನಿ ಲಲಿತಾ ಹಾಗೂ ಬೆಂಬಲಿಗರು ವಿಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊಗಳನ್ನು ಗಮನಿಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಸ್ತೆ ಮಧ್ಯದಲ್ಲಿ ನಿಂತು ಜನ್ಮದಿನ ಆಚರಿಸಿಕೊಂಡು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ್ದ ಆರೋಪದ ಅಡಿ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ, ವಿದ್ಯಾರಣ್ಯಪುರದ ನಿವಾಸಿ ಭಕ್ತವತ್ಸ(47) ಎಂಬುವವರನ್ನು ವಿದ್ಯಾರಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿ, ತನ್ನ ಸ್ನೇಹಿತರು ಹಾಗೂ ಕುಟುಂಬ ಸದಸ್ಯರ ಜತೆ ಸೇರಿಕೊಂಡು ಜೂನ್ 12ರಂದು ವಿದ್ಯಾರಣ್ಯಪುರದ ನರಸೀಪುರ ಮುಖ್ಯರಸ್ತೆಯಲ್ಲಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಜನ್ಮದಿನ ಆಚರಿಸಿಕೊಂಡಿದ್ದ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. </p>.<p>‘ಜನ್ಮದಿನಾಚರಣೆಗೆಂದು ಬ್ಯಾನರ್ ಕಟ್ಟಲಾಗಿತ್ತು. ಪಟಾಕಿ ಸಿಡಿಸಲಾಗಿತ್ತು. ಅಲ್ಲದೆ, ಭಕ್ತವತ್ಸಲನನ್ನು ಮೆಚ್ಚಿಸಲು ಕೆಲವು ಬೆಂಬಲಿಗರು, ತಮ್ಮ ಬೈಕ್ಗಳನ್ನು ಸ್ಟಾರ್ಟ್ ಮಾಡಿ, ಮಾರ್ಪಡಿಸಿದ ಸೈಲೆನ್ಸರ್ಗಳ ಮೂಲಕ ಜೋರು ಶಬ್ದ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ಜನ್ಮದಿನ ಆಚರಣೆಯನ್ನು ಆರೋಪಿಯ ಪತ್ನಿ ಲಲಿತಾ ಹಾಗೂ ಬೆಂಬಲಿಗರು ವಿಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊಗಳನ್ನು ಗಮನಿಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>