<p><strong>ಬೆಂಗಳೂರು</strong>: ಬಿಬಿಎಂಪಿ ಸಿಬ್ಬಂದಿ ಚರ್ಚ್ ಸ್ಟ್ರೀಟ್ನಲ್ಲಿ ಬುಧವಾರ ಸಂಜೆ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ, ಸಾಮಗ್ರಿಗಳನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ವ್ಯಾಪಾರಿಗಳಿಂದ ವಿರೋಧ ವ್ಯಕ್ತವಾಯಿತು.</p>.<p>ಐದಕ್ಕೂ ಹೆಚ್ಚು ವ್ಯಾಪಾರಿಗಳು, ‘ವ್ಯಾಪಾರ ನಡೆಸಲು ಪರವಾನಗಿ ಹೊಂದಿದ್ದೇವೆ’ ಎಂದರು. ಬಿಬಿಎಂಪಿ ಮಾರ್ಷಲ್ಗಳು ತೆರವು ಕಾರ್ಯಾಚರಣೆ ನಡೆಸಿ, ಸಾಮಗ್ರಿಗಳನ್ನು ಕೊಂಡೊಯ್ದರು.</p>.<p>ತೆರವು ಕಾರ್ಯಾಚರಣೆಯನ್ನು ನಿಲ್ಲಿಸಿ, ವಶಪಡಿಸಿಕೊಂಡಿರುವ ಸಾಮಗ್ರಿಗಳನ್ನು ವಾಪಸ್ ನೀಡುವಂತೆ ವ್ಯಾಪಾರಿಗಳು ಆಗ್ರಹಿಸಿದರು. ವ್ಯಾಪಾರಿಗಳು ಗುಂಪುಗೂಡಿದ್ದರಿಂದ, ಪೊಲೀಸರು ಸ್ಥಳಕ್ಕೆ ಬಂದು, ಸಮಸ್ಯೆ ಬಗೆಹರಿಸಿಕೊಳ್ಳಲು ಬಿಬಿಎಂಪಿ ಸಿಬ್ಬಂದಿ ಹಾಗೂ ವ್ಯಾಪಾರಿಗಳಿಗೆ ತಿಳಿಸಿದರು.</p>.<p>‘ಸರ್ಕಾರ ಆರು ತಿಂಗಳ ಹಿಂದೆ ಅರ್ಜಿ ಆಹ್ವಾನಿಸಿದ್ದು, ಇಲ್ಲಿ ವ್ಯಾಪಾರ ನಡೆಸುವುದಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅದರ ದೃಢೀಕರಣ ಪತ್ರ ನಮ್ಮಲ್ಲಿದೆ. ನಿಯಮಗಳ ಪ್ರಕಾರ ತೆರವು ಕಾರ್ಯ ಕೈಗೊಂಡಿಲ್ಲ’ ಎಂದು ಬೀದಿಬದಿ ವ್ಯಾಪಾರಿ ಅಕ್ರಂ ಪಾಷಾ ತಿಳಿಸಿದರು.</p>.<p>ಚರ್ಚ್ ಸ್ಟ್ರೀಟ್ನಲ್ಲಿ ಯಾರಿಗೂ ಬೀದಿ ಬದಿ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಬಿಎಂಪಿ ಸಿಬ್ಬಂದಿ ಚರ್ಚ್ ಸ್ಟ್ರೀಟ್ನಲ್ಲಿ ಬುಧವಾರ ಸಂಜೆ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ, ಸಾಮಗ್ರಿಗಳನ್ನು ವಶಕ್ಕೆ ಪಡೆದ ಸಂದರ್ಭದಲ್ಲಿ ವ್ಯಾಪಾರಿಗಳಿಂದ ವಿರೋಧ ವ್ಯಕ್ತವಾಯಿತು.</p>.<p>ಐದಕ್ಕೂ ಹೆಚ್ಚು ವ್ಯಾಪಾರಿಗಳು, ‘ವ್ಯಾಪಾರ ನಡೆಸಲು ಪರವಾನಗಿ ಹೊಂದಿದ್ದೇವೆ’ ಎಂದರು. ಬಿಬಿಎಂಪಿ ಮಾರ್ಷಲ್ಗಳು ತೆರವು ಕಾರ್ಯಾಚರಣೆ ನಡೆಸಿ, ಸಾಮಗ್ರಿಗಳನ್ನು ಕೊಂಡೊಯ್ದರು.</p>.<p>ತೆರವು ಕಾರ್ಯಾಚರಣೆಯನ್ನು ನಿಲ್ಲಿಸಿ, ವಶಪಡಿಸಿಕೊಂಡಿರುವ ಸಾಮಗ್ರಿಗಳನ್ನು ವಾಪಸ್ ನೀಡುವಂತೆ ವ್ಯಾಪಾರಿಗಳು ಆಗ್ರಹಿಸಿದರು. ವ್ಯಾಪಾರಿಗಳು ಗುಂಪುಗೂಡಿದ್ದರಿಂದ, ಪೊಲೀಸರು ಸ್ಥಳಕ್ಕೆ ಬಂದು, ಸಮಸ್ಯೆ ಬಗೆಹರಿಸಿಕೊಳ್ಳಲು ಬಿಬಿಎಂಪಿ ಸಿಬ್ಬಂದಿ ಹಾಗೂ ವ್ಯಾಪಾರಿಗಳಿಗೆ ತಿಳಿಸಿದರು.</p>.<p>‘ಸರ್ಕಾರ ಆರು ತಿಂಗಳ ಹಿಂದೆ ಅರ್ಜಿ ಆಹ್ವಾನಿಸಿದ್ದು, ಇಲ್ಲಿ ವ್ಯಾಪಾರ ನಡೆಸುವುದಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅದರ ದೃಢೀಕರಣ ಪತ್ರ ನಮ್ಮಲ್ಲಿದೆ. ನಿಯಮಗಳ ಪ್ರಕಾರ ತೆರವು ಕಾರ್ಯ ಕೈಗೊಂಡಿಲ್ಲ’ ಎಂದು ಬೀದಿಬದಿ ವ್ಯಾಪಾರಿ ಅಕ್ರಂ ಪಾಷಾ ತಿಳಿಸಿದರು.</p>.<p>ಚರ್ಚ್ ಸ್ಟ್ರೀಟ್ನಲ್ಲಿ ಯಾರಿಗೂ ಬೀದಿ ಬದಿ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>