<p><strong>ಬೆಂಗಳೂರು</strong>: ‘ದೂರು ನೀಡಲು ಠಾಣೆಗೆ ಬರುವ ಜನರನ್ನು ಹೆಚ್ಚು ಕಾಯಿಸಬಾರದು. ಸುಖಾಸುಮ್ಮನೇ ಹೆಚ್ಚು ಹೊತ್ತು ಕೂರಿಸಿದ ಬಗ್ಗೆ ದೂರುಗಳು ಬಂದರೆ, ಅಂಥ ಠಾಣೆಯ ಪೊಲೀಸರ ವಿರುದ್ಧ ಕರ್ತವ್ಯಲೋಪದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದರು.</p>.<p>ಮಾಸಿಕ ಕವಾಯತಿನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಜನರು ಠಾಣೆಗೆ ಬಂದಾಗ ತ್ವರಿತವಾಗಿ ಸ್ಪಂದಿಸಬೇಕು. ಇನ್ಸ್ಪೆಕ್ಟರ್ ಇಲ್ಲವೆಂದು ಹೇಳಿ ಠಾಣೆಯಲ್ಲಿ ಕೂರಿಸಬಾರದು. ಪ್ರತಿ ಠಾಣೆಯಲ್ಲಿ 8ರಿಂದ 10 ಮಂದಿ ಸಬ್ ಇನ್ಸ್ಪೆಕ್ಟರ್ಗಳು ಇದ್ದಾರೆ. ಅವರೆಲ್ಲರೂ ಜನರ ದೂರು ಆಲಿಸಬೇಕು’ ಎಂದು ಹೇಳಿದರು.</p>.<p>‘ತುರ್ತು ಸಂದರ್ಭ ಹಾಗೂ ರಕ್ಷಣೆಗಾಗಿ ಜನರು ಕರೆ ಮಾಡುತ್ತಾರೆ. ಇನ್ಸ್ಪೆಕ್ಟರ್, ಎಸಿಪಿ, ಡಿಸಿಪಿಗಳು ಪ್ರತಿಯೊಬ್ಬರ ಕರೆಗಳನ್ನು ಸ್ವೀಕರಿಸಬೇಕು. ಜನರ ಸಮಸ್ಯೆ ಆಲಿಸಿ, ಸೂಕ್ತ ಕ್ರಮ ಜರುಗಿಸಬೇಕು’ ಎಂದು ತಿಳಿಸಿದರು.</p>.<p><strong>ರೌಡಿ ಚಟುವಟಿಕೆ ಹತ್ತಿಕ್ಕಲು ಸೂಚನೆ</strong></p><p>‘ನಗರದಲ್ಲಿ ರೌಡಿ ಚಟುವಟಿಕೆಗಳು ಹೆಚ್ಚಾಗಿದೆ. ರೌಡಿಗಳು ಜನರನ್ನು ಬೆದರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ರೌಡಿಗಳ ಕೃತ್ಯಗಳನ್ನು ಹತ್ತಿಕ್ಕಲು ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ದಯಾನಂದ್ ಸೂಚನೆ ನೀಡಿದರು.</p>.<p>‘ರೌಡಿಗಳ ಬಗ್ಗೆ ಹೆಚ್ಚು ನಿಗಾ ವಹಿಸಿ, ಕಾನೂನು ಕ್ರಮಗಳನ್ನು ಜರುಗಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ದೂರು ನೀಡಲು ಠಾಣೆಗೆ ಬರುವ ಜನರನ್ನು ಹೆಚ್ಚು ಕಾಯಿಸಬಾರದು. ಸುಖಾಸುಮ್ಮನೇ ಹೆಚ್ಚು ಹೊತ್ತು ಕೂರಿಸಿದ ಬಗ್ಗೆ ದೂರುಗಳು ಬಂದರೆ, ಅಂಥ ಠಾಣೆಯ ಪೊಲೀಸರ ವಿರುದ್ಧ ಕರ್ತವ್ಯಲೋಪದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ್ ಹೇಳಿದರು.</p>.<p>ಮಾಸಿಕ ಕವಾಯತಿನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಜನರು ಠಾಣೆಗೆ ಬಂದಾಗ ತ್ವರಿತವಾಗಿ ಸ್ಪಂದಿಸಬೇಕು. ಇನ್ಸ್ಪೆಕ್ಟರ್ ಇಲ್ಲವೆಂದು ಹೇಳಿ ಠಾಣೆಯಲ್ಲಿ ಕೂರಿಸಬಾರದು. ಪ್ರತಿ ಠಾಣೆಯಲ್ಲಿ 8ರಿಂದ 10 ಮಂದಿ ಸಬ್ ಇನ್ಸ್ಪೆಕ್ಟರ್ಗಳು ಇದ್ದಾರೆ. ಅವರೆಲ್ಲರೂ ಜನರ ದೂರು ಆಲಿಸಬೇಕು’ ಎಂದು ಹೇಳಿದರು.</p>.<p>‘ತುರ್ತು ಸಂದರ್ಭ ಹಾಗೂ ರಕ್ಷಣೆಗಾಗಿ ಜನರು ಕರೆ ಮಾಡುತ್ತಾರೆ. ಇನ್ಸ್ಪೆಕ್ಟರ್, ಎಸಿಪಿ, ಡಿಸಿಪಿಗಳು ಪ್ರತಿಯೊಬ್ಬರ ಕರೆಗಳನ್ನು ಸ್ವೀಕರಿಸಬೇಕು. ಜನರ ಸಮಸ್ಯೆ ಆಲಿಸಿ, ಸೂಕ್ತ ಕ್ರಮ ಜರುಗಿಸಬೇಕು’ ಎಂದು ತಿಳಿಸಿದರು.</p>.<p><strong>ರೌಡಿ ಚಟುವಟಿಕೆ ಹತ್ತಿಕ್ಕಲು ಸೂಚನೆ</strong></p><p>‘ನಗರದಲ್ಲಿ ರೌಡಿ ಚಟುವಟಿಕೆಗಳು ಹೆಚ್ಚಾಗಿದೆ. ರೌಡಿಗಳು ಜನರನ್ನು ಬೆದರಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ರೌಡಿಗಳ ಕೃತ್ಯಗಳನ್ನು ಹತ್ತಿಕ್ಕಲು ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ದಯಾನಂದ್ ಸೂಚನೆ ನೀಡಿದರು.</p>.<p>‘ರೌಡಿಗಳ ಬಗ್ಗೆ ಹೆಚ್ಚು ನಿಗಾ ವಹಿಸಿ, ಕಾನೂನು ಕ್ರಮಗಳನ್ನು ಜರುಗಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>