<p><strong>ಬೆಂಗಳೂರು:</strong> ಆಶ್ರಯ ಯೋಜನೆಯಡಿ ಮನೆಗಳ ಹಂಚಿಕೆಯಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ, ಸಿಇಒ, ಪಿಡಿಒ ಮತ್ತು ಶಾಸಕರ ನೇತೃತ್ವದಲ್ಲಿ ಒಪ್ಪಿಗೆ ಪಡೆದು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ವಿಕಾಸಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೇ ಮನೆಯನ್ನು ಹಲವರ ಹೆಸರಿನಲ್ಲಿ ಹಂಚಿಕೆ ಮಾಡಿ ಬಿಲ್ ಮಾಡಿರುವುದು ಗಮನಕ್ಕೆ ಬಂದಿದೆ ಎಂದರು.</p>.<p>ಗ್ರಾಮಸಭೆ ತೀರ್ಮಾನವೇ ಅಂತಿಮ ಅಲ್ಲ.ಗ್ರಾಮಪಂಚಾಯ್ತಿ ಅಧಿಕಾರ ಮೊಟಕು ಮಾಡದೇ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು.ತಪ್ಪು ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಇರಲಿದೆ ಎಂದು ನುಡಿದರು.</p>.<p>ಆಶ್ರಯ ಮನೆಗಳ ಹಂಚಿಕೆಯ ನಕಲಿ ಬಿಲ್ ಮೂಲಕ₹ 9 ಕೋಟಿಗೂ ಹೆಚ್ಚು ಮೊತ್ತದ ಹಣ ದುರುಪಯೋಗವಾಗಿರುವ ಅನುಮಾನವಿದೆ. ಇದರಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಪಿಡಿಒಗಳು ಶಾಮೀಲಾಗಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಶ್ರಯ ಯೋಜನೆಯಡಿ ಮನೆಗಳ ಹಂಚಿಕೆಯಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ, ಸಿಇಒ, ಪಿಡಿಒ ಮತ್ತು ಶಾಸಕರ ನೇತೃತ್ವದಲ್ಲಿ ಒಪ್ಪಿಗೆ ಪಡೆದು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.</p>.<p>ವಿಕಾಸಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು,ಒಂದೇ ಮನೆಯನ್ನು ಹಲವರ ಹೆಸರಿನಲ್ಲಿ ಹಂಚಿಕೆ ಮಾಡಿ ಬಿಲ್ ಮಾಡಿರುವುದು ಗಮನಕ್ಕೆ ಬಂದಿದೆ ಎಂದರು.</p>.<p>ಗ್ರಾಮಸಭೆ ತೀರ್ಮಾನವೇ ಅಂತಿಮ ಅಲ್ಲ.ಗ್ರಾಮಪಂಚಾಯ್ತಿ ಅಧಿಕಾರ ಮೊಟಕು ಮಾಡದೇ ಕಾಯ್ದೆಗೆ ಸೂಕ್ತ ತಿದ್ದುಪಡಿ ತರಲಾಗುವುದು.ತಪ್ಪು ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಇರಲಿದೆ ಎಂದು ನುಡಿದರು.</p>.<p>ಆಶ್ರಯ ಮನೆಗಳ ಹಂಚಿಕೆಯ ನಕಲಿ ಬಿಲ್ ಮೂಲಕ₹ 9 ಕೋಟಿಗೂ ಹೆಚ್ಚು ಮೊತ್ತದ ಹಣ ದುರುಪಯೋಗವಾಗಿರುವ ಅನುಮಾನವಿದೆ. ಇದರಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಪಿಡಿಒಗಳು ಶಾಮೀಲಾಗಿದ್ದಾರೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>