<p><strong>ಬೆಂಗಳೂರು:</strong> ನಗರದ ಬನ್ನೇರುಘಟ್ಟ ರಸ್ತೆಯ ಎಎಂಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ನಾಗರಬಾವಿಯ ಪಿ.ಜಿಯೊಂದರಲ್ಲಿದ್ದ ನಿಖಿಲ್ (22) ಆತ್ಮಹತ್ಯೆ ಮಾಡಿಕೊಂಡಿದ್ದು, ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಪಿ.ಜಿಯಿಂದ ಕಾಲೇಜಿಗೆ ತೆರಳುತ್ತಿದ್ದ. ಮಾತ್ರೆ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾಲೇಜಿನ ಡೀನ್ ಕಿರುಕುಳವೇ ಕಾರಣವೆಂದು ಪೋಷಕರು ದೂರು ನೀಡಿದ್ದಾರೆ. ಡೀನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಡೀನ್ ಕಿರುಕುಳದ ವಿಚಾರವನ್ನು ಪುತ್ರ ತಿಳಿಸಿದ್ದ. ಕಿರುಕುಳದಿಂದ ಬೇಸತ್ತು ಮನೆಯಲ್ಲಿದ್ದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾತ್ರೆ ಸೇವಿಸಿದ್ದು ಗೊತ್ತಾದ ಕೂಡಲೇ ನಾಗರಬಾವಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು’ ಎಂದು ಪೋಷಕರು ತಿಳಿಸಿದರು.</p>.<p><strong>‘ನನ್ನ ಎದುರೇ ಅವಮಾನ’</strong>: ‘ನನ್ನ ಮಗನಿಗೆ ಆದ ಸ್ಥಿತಿ ಬೇರೆ ಯಾವ ವಿದ್ಯಾರ್ಥಿಗೂ ಆಗಬಾರದು. ಕಾಲೇಜಿನವರೇ ನನ್ನ ಮಗನನ್ನು ಕೊಂದಿದ್ದಾರೆ. ಗಲಾಟೆ ವಿಚಾರದಲ್ಲಿ ನನ್ನ ಮಗನನ್ನು ಅಮಾನತು ಮಾಡಲಾಗಿತ್ತು. ಆ ವಿಚಾರದಲ್ಲಿ ಚರ್ಚಿಸಲು ಕಾಲೇಜಿಗೆ ತೆರಳಿದಾಗ ನನ್ನ ಎದುರೇ ಮಗನಿಗೆ ಅವಮಾನ ಮಾಡಲಾಯಿತು. ಡೀನ್ ಅವಾಚ್ಯ ಶಬ್ದಗಳಿಂದ ನಿಂದಿಸಿದರು’ ಎಂದು ವಿದ್ಯಾರ್ಥಿಯ ತಾಯಿ ಆಕ್ರೋಶ ಹೊರಹಾಕಿದ್ದಾರೆ.</p>.<p><strong>ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ: </strong>ಕಿರುಕುಳ ನೀಡಿದವರನ್ನು ಬಂಧಿಸುವಂತೆ ಆಗ್ರಹಿಸಿ, ಪೋಷಕರು ಹಾಗೂ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಕಾಲೇಜು ಎದುರು ಮೃತದೇಹವನ್ನು ಕೊಂಡೊಯ್ದು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಪೊಲೀಸರ ಮನವಿ ಮೇರೆಗೆ ಇದನ್ನು ಕೈಬಿಟ್ಟರು.</p>.<p>‘ಅಗತ್ಯಬಿದ್ದರೆ ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲಾಗುವುದು. ಕಾಲೇಜಿನ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಬನ್ನೇರುಘಟ್ಟ ರಸ್ತೆಯ ಎಎಂಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ನಾಗರಬಾವಿಯ ಪಿ.ಜಿಯೊಂದರಲ್ಲಿದ್ದ ನಿಖಿಲ್ (22) ಆತ್ಮಹತ್ಯೆ ಮಾಡಿಕೊಂಡಿದ್ದು, ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಪಿ.ಜಿಯಿಂದ ಕಾಲೇಜಿಗೆ ತೆರಳುತ್ತಿದ್ದ. ಮಾತ್ರೆ ಸೇವಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾಲೇಜಿನ ಡೀನ್ ಕಿರುಕುಳವೇ ಕಾರಣವೆಂದು ಪೋಷಕರು ದೂರು ನೀಡಿದ್ದಾರೆ. ಡೀನ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಡೀನ್ ಕಿರುಕುಳದ ವಿಚಾರವನ್ನು ಪುತ್ರ ತಿಳಿಸಿದ್ದ. ಕಿರುಕುಳದಿಂದ ಬೇಸತ್ತು ಮನೆಯಲ್ಲಿದ್ದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾತ್ರೆ ಸೇವಿಸಿದ್ದು ಗೊತ್ತಾದ ಕೂಡಲೇ ನಾಗರಬಾವಿ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು’ ಎಂದು ಪೋಷಕರು ತಿಳಿಸಿದರು.</p>.<p><strong>‘ನನ್ನ ಎದುರೇ ಅವಮಾನ’</strong>: ‘ನನ್ನ ಮಗನಿಗೆ ಆದ ಸ್ಥಿತಿ ಬೇರೆ ಯಾವ ವಿದ್ಯಾರ್ಥಿಗೂ ಆಗಬಾರದು. ಕಾಲೇಜಿನವರೇ ನನ್ನ ಮಗನನ್ನು ಕೊಂದಿದ್ದಾರೆ. ಗಲಾಟೆ ವಿಚಾರದಲ್ಲಿ ನನ್ನ ಮಗನನ್ನು ಅಮಾನತು ಮಾಡಲಾಗಿತ್ತು. ಆ ವಿಚಾರದಲ್ಲಿ ಚರ್ಚಿಸಲು ಕಾಲೇಜಿಗೆ ತೆರಳಿದಾಗ ನನ್ನ ಎದುರೇ ಮಗನಿಗೆ ಅವಮಾನ ಮಾಡಲಾಯಿತು. ಡೀನ್ ಅವಾಚ್ಯ ಶಬ್ದಗಳಿಂದ ನಿಂದಿಸಿದರು’ ಎಂದು ವಿದ್ಯಾರ್ಥಿಯ ತಾಯಿ ಆಕ್ರೋಶ ಹೊರಹಾಕಿದ್ದಾರೆ.</p>.<p><strong>ನ್ಯಾಯಕ್ಕೆ ಆಗ್ರಹಿಸಿ ಪ್ರತಿಭಟನೆ: </strong>ಕಿರುಕುಳ ನೀಡಿದವರನ್ನು ಬಂಧಿಸುವಂತೆ ಆಗ್ರಹಿಸಿ, ಪೋಷಕರು ಹಾಗೂ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು. ಕಾಲೇಜು ಎದುರು ಮೃತದೇಹವನ್ನು ಕೊಂಡೊಯ್ದು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಪೊಲೀಸರ ಮನವಿ ಮೇರೆಗೆ ಇದನ್ನು ಕೈಬಿಟ್ಟರು.</p>.<p>‘ಅಗತ್ಯಬಿದ್ದರೆ ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲಾಗುವುದು. ಕಾಲೇಜಿನ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>