<p><strong>ಬೆಂಗಳೂರು</strong>: ಕಿವಿಯಲ್ಲಿ ಹೆಡ್ಫೋನ್ ಹಾಕಿಕೊಂಡು ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ನಡೆದಿದೆ.</p>.<p>ವೀರಣ್ಣಪಾಳ್ಯ ನಿವಾಸಿ ಶಶಿಕುಮಾರ್(20) ಮೃತ ವಿದ್ಯಾರ್ಥಿ.</p>.<p>ಮಂಗಳವಾರ ಬೆಳಿಗ್ಗೆ 8ರ ಸುಮಾರಿಗೆ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.</p>.<p>ವೀರಣ್ಣಪಾಳ್ಯದ ನಿವಾಸಿ ವಾಸುದೇವ್ ಅವರ ಪುತ್ರ ಶಶಿಕುಮಾರ್, ಯಲಹಂಕದಲ್ಲಿ ಇರುವ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ಬೆಳಿಗ್ಗೆ ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವಾಗ ಕಿವಿಗೆ ಹೆಡ್ಫೋನ್ ಹಾಕಿಕೊಂಡು ನಾಗೇನಹಳ್ಳಿ ರೈಲ್ವೆ ಹಳಿ ದಾಟುತ್ತಿದ್ದ. ಆ ಸಮಯದಲ್ಲಿ ಎಲೆಕ್ಟ್ರಿಕ್ ಎಂಜಿನ್ನ ಗೂಡ್ಸ್ ರೈಲು ಬಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.</p>.<p>ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಿವಿಯಲ್ಲಿ ಹೆಡ್ಫೋನ್ ಹಾಕಿಕೊಂಡು ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ನಡೆದಿದೆ.</p>.<p>ವೀರಣ್ಣಪಾಳ್ಯ ನಿವಾಸಿ ಶಶಿಕುಮಾರ್(20) ಮೃತ ವಿದ್ಯಾರ್ಥಿ.</p>.<p>ಮಂಗಳವಾರ ಬೆಳಿಗ್ಗೆ 8ರ ಸುಮಾರಿಗೆ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.</p>.<p>ವೀರಣ್ಣಪಾಳ್ಯದ ನಿವಾಸಿ ವಾಸುದೇವ್ ಅವರ ಪುತ್ರ ಶಶಿಕುಮಾರ್, ಯಲಹಂಕದಲ್ಲಿ ಇರುವ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ಬೆಳಿಗ್ಗೆ ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವಾಗ ಕಿವಿಗೆ ಹೆಡ್ಫೋನ್ ಹಾಕಿಕೊಂಡು ನಾಗೇನಹಳ್ಳಿ ರೈಲ್ವೆ ಹಳಿ ದಾಟುತ್ತಿದ್ದ. ಆ ಸಮಯದಲ್ಲಿ ಎಲೆಕ್ಟ್ರಿಕ್ ಎಂಜಿನ್ನ ಗೂಡ್ಸ್ ರೈಲು ಬಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.</p>.<p>ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>