<p><strong>ಬೆಂಗಳೂರು:</strong> ಸ್ನೇಹಿತನ ತಂಗಿಯನ್ನು ರೇಗಿಸುತ್ತಿರುವುದನ್ನು ಪ್ರಶ್ನಿಸಿದ ವಿದ್ಯಾರ್ಥಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಬಿಟಿಎಂ ಲೇಔಟ್ನ ಸೋಮೇಶ್ವರ ನಿವಾಸಿ ಸಜೀತ್ (19) ಇರಿತಕ್ಕೊಳಗಾದ ವಿದ್ಯಾರ್ಥಿ. ಗಾಯಾಳು ಚೇತರಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದ ಹರಿ, ಪಟ್ಟಾಭಿ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿದ್ದು ಎಲ್ಲರೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಸಜೀತ್, ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ ಕಲಿಯುತ್ತಿದ್ದಾನೆ. ಅದೇ ಕಾಲೇಜಿನಲ್ಲಿ ಸಜೀತ್ ಸ್ನೇಹಿತ ಮತ್ತು ಆತನ ತಂಗಿ ಪಿಯುಸಿ ಓದುತ್ತಿದ್ದಾರೆ. ಸ್ನೇಹಿತನ ತಂಗಿಯನ್ನು ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ನಿತ್ಯ ರೇಗಿಸುತ್ತಿರುವ ಬಗ್ಗೆ ಸ್ನೇಹಿತ ಹೇಳಿಕೊಂಡಿದ್ದ.</p>.<p>ಬಾಲಕಿಯನ್ನು ರೇಗಿಸುತ್ತಿದ್ದ ವಿದ್ಯಾರ್ಥಿಗೆ ಜ. 22ರಂದು ಸಜೀತ್ ಎಚ್ಚರಿಕೆ ನೀಡಿದ್ದ. ಇಷ್ಟಕ್ಕೆ ಆ ವಿದ್ಯಾರ್ಥಿ ತನ್ನ ಸ್ನೇಹಿತರನ್ನು ಕರೆಕೊಂಡು ಬಂದು ಸಜೀತ್, ಹೊಟ್ಟೆಗೆ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸ್ನೇಹಿತನ ತಂಗಿಯನ್ನು ರೇಗಿಸುತ್ತಿರುವುದನ್ನು ಪ್ರಶ್ನಿಸಿದ ವಿದ್ಯಾರ್ಥಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಬಿಟಿಎಂ ಲೇಔಟ್ನ ಸೋಮೇಶ್ವರ ನಿವಾಸಿ ಸಜೀತ್ (19) ಇರಿತಕ್ಕೊಳಗಾದ ವಿದ್ಯಾರ್ಥಿ. ಗಾಯಾಳು ಚೇತರಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದ ಹರಿ, ಪಟ್ಟಾಭಿ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿದ್ದು ಎಲ್ಲರೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಸಜೀತ್, ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಕಾಂ ಕಲಿಯುತ್ತಿದ್ದಾನೆ. ಅದೇ ಕಾಲೇಜಿನಲ್ಲಿ ಸಜೀತ್ ಸ್ನೇಹಿತ ಮತ್ತು ಆತನ ತಂಗಿ ಪಿಯುಸಿ ಓದುತ್ತಿದ್ದಾರೆ. ಸ್ನೇಹಿತನ ತಂಗಿಯನ್ನು ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ನಿತ್ಯ ರೇಗಿಸುತ್ತಿರುವ ಬಗ್ಗೆ ಸ್ನೇಹಿತ ಹೇಳಿಕೊಂಡಿದ್ದ.</p>.<p>ಬಾಲಕಿಯನ್ನು ರೇಗಿಸುತ್ತಿದ್ದ ವಿದ್ಯಾರ್ಥಿಗೆ ಜ. 22ರಂದು ಸಜೀತ್ ಎಚ್ಚರಿಕೆ ನೀಡಿದ್ದ. ಇಷ್ಟಕ್ಕೆ ಆ ವಿದ್ಯಾರ್ಥಿ ತನ್ನ ಸ್ನೇಹಿತರನ್ನು ಕರೆಕೊಂಡು ಬಂದು ಸಜೀತ್, ಹೊಟ್ಟೆಗೆ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>