<p><strong>ಕೆ.ಆರ್.ಪುರ:</strong> ‘ಮಕ್ಕಳು ತಮ್ಮ ಮೇಲೆ ವಿಶ್ವಾಸವಿಟ್ಟು ಓದಿದರೆ ಅಂದುಕೊಂಡಿದ್ದನ್ನು ಸಾಧಿಸಬಹುದು’ ಎಂದು ಕೆ.ಆರ್.ಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್.ರಾಧಾ ಅಭಿಪ್ರಾಯಪಟ್ಟರು.</p>.<p>ಕೆ.ಆರ್.ಪುರದ ಶ್ರೀವೆಂಕಟೇಶ್ವರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಪ್ರೋತ್ಸಾಹಧನ ವಿತರಿಸಿ ಮಾತನಾಡಿದರು.</p>.<p>‘ಮಕ್ಕಳು ಅಡ್ಡದಾರಿ ಹಿಡಿಯದಂತೆ ಪೋಷಕರು ಮನ ಒಲಿಸಬೇಕು. ಸುಲಭವಾಗಿ ಸಿಕ್ಕಿದ್ದು ಹೆಚ್ಚು ದಿನ ಉಳಿಯುವುದಿಲ್ಲ. ಕಷ್ಟಪಟ್ಟು ಓದಿ ಸಾಧನೆ ಮಾಡಿದರೆ ಸಾಧನೆಗೆ ಬೆಲೆ ಬರುತ್ತದೆ. ಮಕ್ಕಳ ಆಸಕ್ತಿಗನುಗುಣವಾಗಿ ಓದಲು ಅವಕಾಶ ಮಾಡಿಕೊಡಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೆ.ವಿ.ಮುನಿಸ್ವಾಮಿ ಮಾತನಾಡಿ, ‘ಕೆಲ ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈ ವರ್ಷ ₹2.95 ಲಕ್ಷವನ್ನು 93 ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ’ ಎಂದರು.</p>.<p>ಚಾರ್ಟರ್ಡ್ ಅಕೌಂಟೆಂಟ್ ನವೀನ್ ಕುಮಾರ್, ಕಾಲೇಜು ನಿರ್ದೇಶಕ ಎಂ.ರವಿ, ಆಡಳಿತಾಧಿಕಾರಿ ಪುಟ್ಟರಾಜು, ಪ್ರಾಂಶುಪಾಲ ಜಿ.ಇ.ಪ್ರಕಾಶ್, ಉಪಪ್ರಾಂಶುಪಾಲ ನಾಗಾರ್ಜುನ, ಎಚ್.ಎಂ. ಗೀತಾಂಜಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಮಕ್ಕಳು ತಮ್ಮ ಮೇಲೆ ವಿಶ್ವಾಸವಿಟ್ಟು ಓದಿದರೆ ಅಂದುಕೊಂಡಿದ್ದನ್ನು ಸಾಧಿಸಬಹುದು’ ಎಂದು ಕೆ.ಆರ್.ಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್.ರಾಧಾ ಅಭಿಪ್ರಾಯಪಟ್ಟರು.</p>.<p>ಕೆ.ಆರ್.ಪುರದ ಶ್ರೀವೆಂಕಟೇಶ್ವರ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಪ್ರೋತ್ಸಾಹಧನ ವಿತರಿಸಿ ಮಾತನಾಡಿದರು.</p>.<p>‘ಮಕ್ಕಳು ಅಡ್ಡದಾರಿ ಹಿಡಿಯದಂತೆ ಪೋಷಕರು ಮನ ಒಲಿಸಬೇಕು. ಸುಲಭವಾಗಿ ಸಿಕ್ಕಿದ್ದು ಹೆಚ್ಚು ದಿನ ಉಳಿಯುವುದಿಲ್ಲ. ಕಷ್ಟಪಟ್ಟು ಓದಿ ಸಾಧನೆ ಮಾಡಿದರೆ ಸಾಧನೆಗೆ ಬೆಲೆ ಬರುತ್ತದೆ. ಮಕ್ಕಳ ಆಸಕ್ತಿಗನುಗುಣವಾಗಿ ಓದಲು ಅವಕಾಶ ಮಾಡಿಕೊಡಬೇಕು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೆ.ವಿ.ಮುನಿಸ್ವಾಮಿ ಮಾತನಾಡಿ, ‘ಕೆಲ ವರ್ಷಗಳಿಂದ ಬಡ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈ ವರ್ಷ ₹2.95 ಲಕ್ಷವನ್ನು 93 ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ’ ಎಂದರು.</p>.<p>ಚಾರ್ಟರ್ಡ್ ಅಕೌಂಟೆಂಟ್ ನವೀನ್ ಕುಮಾರ್, ಕಾಲೇಜು ನಿರ್ದೇಶಕ ಎಂ.ರವಿ, ಆಡಳಿತಾಧಿಕಾರಿ ಪುಟ್ಟರಾಜು, ಪ್ರಾಂಶುಪಾಲ ಜಿ.ಇ.ಪ್ರಕಾಶ್, ಉಪಪ್ರಾಂಶುಪಾಲ ನಾಗಾರ್ಜುನ, ಎಚ್.ಎಂ. ಗೀತಾಂಜಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>