ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸವಾಲು ಎದುರಿಸಲು ವಿದ್ಯಾರ್ಥಿಗಳು ಶಕ್ತರಾಗಬೇಕು

Last Updated 6 ಜುಲೈ 2019, 19:28 IST
ಅಕ್ಷರ ಗಾತ್ರ

ಬೆಂಗಳೂರು: ‘ವಿದ್ಯಾರ್ಥಿಗಳು ಪರೀಕ್ಷೆಯ ಜೊತೆಗೆ ಯಾವುದೇ ರೀತಿಯ ಸವಾಲನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಇದಕ್ಕಾಗಿ ಉಪನ್ಯಾಸಕರು ವಿದ್ಯಾರ್ಥಿಗಳತ್ತ ಹೆಚ್ಚಿನ ಗಮನ ನೀಡಬೇಕು’ಎಂದುಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎನ್.ಚಂದ್ರಪ್ಪ ಕಿವಿಮಾತು ಹೇಳಿದರು.

ಯಲಹಂಕದ ಶನಿವಾರ ನಡೆದ ಆದಿತ್ಯ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆಯ (ಎಐಎಂಎಸ್‍ಆರ್) ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಪೈಪೋಟಿ ಹಾಗೂ ಪರೀಕ್ಷಾ ವ್ಯವಸ್ಥೆಗಳಲ್ಲಿ ಬದಲಾವಣೆಗಳಿಂದ ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಅಗತ್ಯ ಕೌಶಲಗಳನ್ನು ಬೆಳೆಸಿಕೊಳ್ಳುವುದು ಮುಖ್ಯ’ ಎಂದರು.

ಆದಿತ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ.ಎ.ವಿಶ್ವನಾಥ್ ಮಾತನಾಡಿ, ‘ಉತ್ತಮ ಶಿಕ್ಷಣ ಪಡೆಯುವುದು ಹಾಗು ಜ್ಞಾನ ಹೆಚ್ಚಿಸಿಕೊಳ್ಳುವ ಹಸಿವು ವಿದ್ಯಾರ್ಥಿಗಳಲ್ಲಿ ಸದಾ ಇರಬೇಕು. ಅಂತಹ ವಿದ್ಯಾರ್ಥಿಗಳ ಭವಿಷ್ಯ ಉತ್ತಮವಾಗಿ ರೂಪುಗೊಳ್ಳುವುದು’ ಎಂದು ಹೇಳಿದರು.

ಬಿ.ಕಾಂ, ಬಿಬಿಎ, ಬಿಸಿಎ, ಎಂಬಿಎ ಸೇರಿ 350 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT