ರಾಜರಾಜೇಶ್ವರಿನಗರ: ‘ವಿದ್ಯಾರ್ಥಿಗಳು ಸಂಸ್ಕಾರ ಮತ್ತು ಸಂಸ್ಕೃತಿಯ ರಾಯಭಾರಿಗಳಾದಾಗ ಮಾತ್ರ ದೇಶದ ಸಂಸ್ಕೃತಿ, ಪರಂಪರೆಯ ಉಳಿಯುವಿಕೆಯ ಪ್ರತೀಕಗಳಾಗಬಹುದು’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹೇಳಿದರು.
ಮಾಗಡಿ ರಸ್ತೆಯ ಕೊಡಿಗೇಹಳ್ಳಿಯ ನ್ಯೂ ಹಾರ್ಡ್ವಿಕ್ ಇಂಡಿಯನ್ ಸ್ಕೂಲ್ನಲ್ಲಿ ಹಮ್ಮಿಕೊಂಡಿದ್ದ ದಶವೈಭವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಚಿತ್ರದುರ್ಗ ಭೋವಿ ಗುರು ಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ‘ಪೋಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಉತ್ತಮವಾದ ದಾರಿ ತೋರಿಸುವ ಹೊಣೆ ಹೊರಬೇಕು’ ಎಂದರು.
ಸಂಸ್ಥೆಯ ಅಧ್ಯಕ್ಷ ವಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.