ಉಪನಗರ ರೈಲುಗಳು ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಬರುವ ಅದೆಷ್ಟೋ ಜನರಿಗೆ ಸಹಾಯಕವಾಗಿದ್ದವು. ಆದರೆ, ಹಳಿ ನವೀಕರಣದ ಕಾರಣ ಮುಂದಿಟ್ಟುಕೊಂಡು ಈ ರೈಲುಗಳನ್ನು ರದ್ದುಗೊಳಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಂಡ ಕ್ರಮ ಇದಾದರೂ ಆ ಕಾಮಗಾರಿಗೆ ಹೆಚ್ಚುವರಿ ಕಾರ್ಮಿಕರು ಮತ್ತು ಯಂತ್ರಗಳನ್ನು ಬಳಸಿ ಬೇಗನೆ ಪೂರ್ಣಗೊಳಿಸಬೇಕು. ರದ್ದಾಗಿರುವ ರೈಲುಗಳನ್ನು ಪುನರಾರಂಭಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. ಈ ವಿಷಯವನ್ನು ರೈಲ್ವೆ ಸಚಿವ ಪಿಯೂಷ್ ಗೋಯೆಲ್ ಅವರ ಗಮನಕ್ಕೂ ತರುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.