<p><strong>ಬೆಂಗಳೂರು</strong>: ಉಪನಗರ ರೈಲು ಯೋಜನೆಯ ಅನುಷ್ಠಾನಕ್ಕಾಗಿ ಜರ್ಮನಿಯ ಕೆಎಫ್ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ಜತೆ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್) ಒಪ್ಪಂದ ಮಾಡಿಕೊಂಡಿದೆ.</p>.<p>ದೆಹಲಿಯಲ್ಲಿ ಶನಿವಾರ ಎರಡೂ ಸಂಸ್ಥೆಯ ಉನ್ನತ ಪ್ರತಿನಿಧಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಯೋಜನೆಗೆ ₹4,500 ಕೋಟಿ ಸಾಲ ಮತ್ತು ₹45 ಕೋಟಿ ಅನುದಾನ ಸಿಗಲಿದೆ. ಇದರಿಂದ ಬೆಂಗಳೂರು ಉಪನಗರ ರೈಲು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.</p>.<p>ಬೆಂಗಳೂನಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ₹15,767 ಕೋಟಿ ವಿನಿಯೋಗಿಸಲಾಗುತ್ತಿದೆ. ಹಲವು ಹಣಕಾಸು ಸಂಸ್ಥೆಗಳಿಂದ ₹7,438 ಕೋಟಿ ಸಾಲವಾಗಿ ತೆಗೆದುಕೊಳ್ಳಲಾಗುತ್ತಿದೆ. ಯೋಜನೆಯನ್ನು ಕೆ-ರೈಡ್ ಮತ್ತು ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯದ ಮೂಲಕ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಬ್ಯಾಂಕ್ ಅಧಿಕಾರಿ ಫಿಲಿಫ್ ವೈಶ್, ಉಪನಿರ್ದೇಶಕಿ ರುಕ್ಮಿಣಿ ಪಾರ್ಥಸಾರಥಿ, ಸ್ವಾತಿ ಖನ್ನಾ, ಕೇಂದ್ರ ಆರ್ಥಿಕ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮಾನಿಶಾ ಸಿನ್ಹಾ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಶ್ರೀಧರಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉಪನಗರ ರೈಲು ಯೋಜನೆಯ ಅನುಷ್ಠಾನಕ್ಕಾಗಿ ಜರ್ಮನಿಯ ಕೆಎಫ್ಡಬ್ಲ್ಯು ಡೆವಲಪ್ಮೆಂಟ್ ಬ್ಯಾಂಕ್ ಜತೆ ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತ (ಕೆ-ರೈಡ್) ಒಪ್ಪಂದ ಮಾಡಿಕೊಂಡಿದೆ.</p>.<p>ದೆಹಲಿಯಲ್ಲಿ ಶನಿವಾರ ಎರಡೂ ಸಂಸ್ಥೆಯ ಉನ್ನತ ಪ್ರತಿನಿಧಿಗಳು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಯೋಜನೆಗೆ ₹4,500 ಕೋಟಿ ಸಾಲ ಮತ್ತು ₹45 ಕೋಟಿ ಅನುದಾನ ಸಿಗಲಿದೆ. ಇದರಿಂದ ಬೆಂಗಳೂರು ಉಪನಗರ ರೈಲು ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.</p>.<p>ಬೆಂಗಳೂನಲ್ಲಿ ಸುಗಮ ಸಂಚಾರ ವ್ಯವಸ್ಥೆಗಾಗಿ ₹15,767 ಕೋಟಿ ವಿನಿಯೋಗಿಸಲಾಗುತ್ತಿದೆ. ಹಲವು ಹಣಕಾಸು ಸಂಸ್ಥೆಗಳಿಂದ ₹7,438 ಕೋಟಿ ಸಾಲವಾಗಿ ತೆಗೆದುಕೊಳ್ಳಲಾಗುತ್ತಿದೆ. ಯೋಜನೆಯನ್ನು ಕೆ-ರೈಡ್ ಮತ್ತು ಕೇಂದ್ರ ಸರ್ಕಾರದ ರೈಲ್ವೆ ಸಚಿವಾಲಯದ ಮೂಲಕ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.<p>ಬ್ಯಾಂಕ್ ಅಧಿಕಾರಿ ಫಿಲಿಫ್ ವೈಶ್, ಉಪನಿರ್ದೇಶಕಿ ರುಕ್ಮಿಣಿ ಪಾರ್ಥಸಾರಥಿ, ಸ್ವಾತಿ ಖನ್ನಾ, ಕೇಂದ್ರ ಆರ್ಥಿಕ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮಾನಿಶಾ ಸಿನ್ಹಾ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಶ್ರೀಧರಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>