<p><strong>ಬೆಂಗಳೂರು</strong>: ನಗರದ ಸುಬ್ರಮಣ್ಯೇಶ್ವರ ಕೋ ಅಪರೇಟಿವ್ ಬ್ಯಾಂಕ್ ಲಿಮಿಟೆಡ್ 2023–24ನೇ ಸಾಲಿನಲ್ಲಿ ₹ 8.83 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಕೆ.ಎಂ. ರಂಗಧಾಮ ಶೆಟ್ಟಿ ಮತ್ತು ಉಪಾಧ್ಯಕ್ಷ ಡಿ.ಆರ್. ವಿಜಯಸಾರಥಿ ತಿಳಿಸಿದರು.</p>.<p>ಬ್ಯಾಂಕ್ನ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಬ್ಯಾಂಕ್ ಇತ್ತೀಚೆಗೆ ಸುವರ್ಣ ಮಹೋತ್ಸವ ಆಚರಿಸಿಕೊಂಡಿದೆ, 2020-21ರಲ್ಲಿ ಬ್ಯಾಂಕ್ ₹22.38 ಲಕ್ಷ ಲಾಭ ಗಳಿಸಿತ್ತು. ಈ ಬಾರಿ ಲಾಭದ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ವಿವರಿಸಿದರು.</p>.<p>‘ಲೆಕ್ಕ ಪರಿಶೋಧನೆಯಲ್ಲಿ ಬ್ಯಾಂಕ್ ಅನ್ನು ‘ಎ’ ವಿಭಾಗದಲ್ಲಿ ವರ್ಗೀಕರಿಸಲಾಗಿದೆ. ನಿವ್ವಳ ಅನುತ್ಪಾದಕ ಆಸ್ತಿ (ಎನ್ಪಿಎ) ಶೇಕಡ 6ಕ್ಕಿಂತ ಕಡಿಮೆ ಇರಬೇಕೆಂಬ ನಿಯಮ ಇದೆ. ನಮ್ಮ ಬ್ಯಾಂಕ್ನ ಎನ್ಪಿಎ ಶೇ 3ರ ಮಿತಿಯಲ್ಲಿದೆ’ ಎಂದರು.</p>.<p>‘ಬ್ಯಾಂಕ್ ಈಗಾಗಲೇ ಎರಡು ಶಾಖೆಗಳಲ್ಲಿ ಸ್ವಂತ ಕಟ್ಟಡ ಹೊಂದಿದ್ದು, ಮುಂದೆ ಮತ್ತೆ ಎರಡು ಶಾಖೆಗಳಿಗೆ ಸ್ವಂತ ಕಟ್ಟಡ ನಿರ್ಮಿಸುವ ಗುರಿ ಇದೆ’ ಎಂದು ಹೇಳಿದರು.</p>.<p>ನಿರ್ದೇಶಕರಾದ ಸಿ.ಎಲ್. ವೆಂಕಟಾಚಲಪತಿ, ಪಿ. ರುದ್ರಮೂರ್ತಿ, ಸತ್ಯಮೂರ್ತಿ, ನಂಜೇಗೌಡ, ಎಂ.ಕೆ. ಸುರೇಶ್ ಬಾಬು, ಮಹಾಲಕ್ಷ್ಮಿ, ಅನ್ನಪೂರ್ಣಮ್ಮ, ಜಯಲಕ್ಷ್ಮಿ ಜೆ. ತೋಟಗೆರೆ, ರವೀಂದ್ರ ಪಿ.ಕೆ., ರವಿ ಕೆ., ಎಚ್. ಮಾರುತಿ, ಪ್ರಧಾನ ವ್ಯವಸ್ಥಾಪಕ ಕೆ.ಎನ್. ಕೃಷ್ಣಯ್ಯಶೆಟ್ಟಿ, ಸಲಹೆಗಾರ ಬಿ.ಆರ್. ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಸುಬ್ರಮಣ್ಯೇಶ್ವರ ಕೋ ಅಪರೇಟಿವ್ ಬ್ಯಾಂಕ್ ಲಿಮಿಟೆಡ್ 2023–24ನೇ ಸಾಲಿನಲ್ಲಿ ₹ 8.83 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷ ಕೆ.ಎಂ. ರಂಗಧಾಮ ಶೆಟ್ಟಿ ಮತ್ತು ಉಪಾಧ್ಯಕ್ಷ ಡಿ.ಆರ್. ವಿಜಯಸಾರಥಿ ತಿಳಿಸಿದರು.</p>.<p>ಬ್ಯಾಂಕ್ನ ಸರ್ವ ಸದಸ್ಯರ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಬ್ಯಾಂಕ್ ಇತ್ತೀಚೆಗೆ ಸುವರ್ಣ ಮಹೋತ್ಸವ ಆಚರಿಸಿಕೊಂಡಿದೆ, 2020-21ರಲ್ಲಿ ಬ್ಯಾಂಕ್ ₹22.38 ಲಕ್ಷ ಲಾಭ ಗಳಿಸಿತ್ತು. ಈ ಬಾರಿ ಲಾಭದ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ವಿವರಿಸಿದರು.</p>.<p>‘ಲೆಕ್ಕ ಪರಿಶೋಧನೆಯಲ್ಲಿ ಬ್ಯಾಂಕ್ ಅನ್ನು ‘ಎ’ ವಿಭಾಗದಲ್ಲಿ ವರ್ಗೀಕರಿಸಲಾಗಿದೆ. ನಿವ್ವಳ ಅನುತ್ಪಾದಕ ಆಸ್ತಿ (ಎನ್ಪಿಎ) ಶೇಕಡ 6ಕ್ಕಿಂತ ಕಡಿಮೆ ಇರಬೇಕೆಂಬ ನಿಯಮ ಇದೆ. ನಮ್ಮ ಬ್ಯಾಂಕ್ನ ಎನ್ಪಿಎ ಶೇ 3ರ ಮಿತಿಯಲ್ಲಿದೆ’ ಎಂದರು.</p>.<p>‘ಬ್ಯಾಂಕ್ ಈಗಾಗಲೇ ಎರಡು ಶಾಖೆಗಳಲ್ಲಿ ಸ್ವಂತ ಕಟ್ಟಡ ಹೊಂದಿದ್ದು, ಮುಂದೆ ಮತ್ತೆ ಎರಡು ಶಾಖೆಗಳಿಗೆ ಸ್ವಂತ ಕಟ್ಟಡ ನಿರ್ಮಿಸುವ ಗುರಿ ಇದೆ’ ಎಂದು ಹೇಳಿದರು.</p>.<p>ನಿರ್ದೇಶಕರಾದ ಸಿ.ಎಲ್. ವೆಂಕಟಾಚಲಪತಿ, ಪಿ. ರುದ್ರಮೂರ್ತಿ, ಸತ್ಯಮೂರ್ತಿ, ನಂಜೇಗೌಡ, ಎಂ.ಕೆ. ಸುರೇಶ್ ಬಾಬು, ಮಹಾಲಕ್ಷ್ಮಿ, ಅನ್ನಪೂರ್ಣಮ್ಮ, ಜಯಲಕ್ಷ್ಮಿ ಜೆ. ತೋಟಗೆರೆ, ರವೀಂದ್ರ ಪಿ.ಕೆ., ರವಿ ಕೆ., ಎಚ್. ಮಾರುತಿ, ಪ್ರಧಾನ ವ್ಯವಸ್ಥಾಪಕ ಕೆ.ಎನ್. ಕೃಷ್ಣಯ್ಯಶೆಟ್ಟಿ, ಸಲಹೆಗಾರ ಬಿ.ಆರ್. ನಾಗರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>