<p><strong>ಬೆಂಗಳೂರು:</strong>ಉಪನಗರ ರೈಲು ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿಶೇಷ ಉದ್ದೇಶದ ಘಟಕ (ಎಸ್ಪಿವಿ) ಸ್ಥಾಪಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಆದರೆ, ಪ್ರಸ್ತಾವದಲ್ಲಿ ಕೋರಲಾಗಿದ್ದಂತೆ ಉನ್ನತ ಅಧಿಕಾರ ನೀಡಲು ಸರ್ಕಾರ ನಿರಾಕರಿಸಿದೆ.</p>.<p>‘ಸಹಭಾಗಿತ್ವ ಒಪ್ಪಂದಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅನುಮೋದನೆ ನೀಡಿದ್ದಾರೆ. ಈ ಕುರಿತು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆ–ರೈಡ್) ಅಧಿಕಾರಿ ಸಿರ್ರಾ ಗಗರಿನ್ ಅವರಿಗೆ ಪತ್ರ ಬರೆಯಲಾಗಿದ್ದು, ಎಸ್ಪಿವಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸುವಂತೆ ಹೇಳಲಾಗಿದೆ’ ಎಂದುಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಿಳಿಸಿದ್ದಾರೆ.</p>.<p>ಕಾನೂನು, ಹಣಕಾಸು ಇಲಾಖೆಗಳ ಅಭಿಪ್ರಾಯ ಪಡೆದು ಮುಂದುವರಿಯುವಂತೆಯೂ ಕೆ–ರೈಡ್ಗೆ ಪತ್ರದಲ್ಲಿ ತಿಳಿಸಲಾಗಿದೆ.</p>.<p>‘ಹಣಕಾಸು ಕುರಿತು ನಿರ್ಧರಿಸುವ ಅಧಿಕಾರ ಇಲ್ಲದ ಕಾರಣ ಮತ್ತು ಪ್ರತಿ ಹಂತದಲ್ಲಿಯೂ ಅನುಮತಿ ಪಡೆಯಬೇಕಾದ್ದರಿಂದ, ₹17,000 ಕೋಟಿ ಮೊತ್ತದ ಎಸ್ಪಿವಿ ನಿರ್ಮಾಣ ಕಾರ್ಯ ವಿಳಂಬವಾಗಬಹುದು ಎಂದು ಮೂಲಗಳು ಹೇಳಿವೆ.</p>.<p>‘ಯೋಜನೆ ತ್ವರಿತವಾಗಿ ಅನುಷ್ಠಾನಗೊಳ್ಳಬೇಕೆಂದರೆ ಪ್ರಧಾನಮಂತ್ರಿ ಸಚಿವಾಲಯ ಮಧ್ಯ ಪ್ರವೇಶಿಸಿ, ಎಲ್ಲ ಷರತ್ತುಗಳನ್ನು ಹಿಂತೆಗೆದುಕೊಳ್ಳಬೇಕು’ ಎಂದು ರೈಲ್ವೆ ಹೋರಾಟಗಾರ ಸಂಜೀವ್ ದ್ಯಾಮಣ್ಣವರ ಹೇಳಿದರು.</p>.<p><strong>ಮತ್ತೊಮ್ಮೆ ಡಿಪಿಆರ್ಗೆ ಸೂಚನೆ</strong></p>.<p>ಉಪನಗರ ರೈಲು ಯೋಜನೆಗೆ ಮತ್ತೊಮ್ಮೆ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಹೊಸ ಡಿಪಿಆರ್ ಸಿದ್ಧಪಡಿಸುವಂತೆ ರೈಲ್ ಇಂಡಿಯಾ ಟೆಕ್ನಿಕಲ್ ಎಕನಾಮಿಕಲ್ ಸರ್ವೀಸ್ಗೆ (ರೈಟ್ಸ್) ಸೂಚನೆ ನೀಡಿದೆ.</p>.<p>161 ಕಿ.ಮೀ ರೈಲು ಮಾರ್ಗದ ಯೋಜನೆಗೆ ರೈಟ್ಸ್ ಸಂಸ್ಥೆ ಡಿಪಿಆರ್ ಸಿದ್ಧಪಡಿಸಿದೆ. ನಮ್ಮ ಮೆಟ್ರೊ ಮಾರ್ಗ ಮತ್ತು ನಿಲ್ದಾಣಗಳಿಗೆ ತೊಂದರೆ ಆಗದಂತೆ ಯೋಜನೆ ಜಾರಿಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಡಿಪಿಆರ್ ಬದಲಾವಣೆಗೆ ಸೂಚಿಸಲಾಗಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಉಪನಗರ ರೈಲು ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ವಿಶೇಷ ಉದ್ದೇಶದ ಘಟಕ (ಎಸ್ಪಿವಿ) ಸ್ಥಾಪಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಆದರೆ, ಪ್ರಸ್ತಾವದಲ್ಲಿ ಕೋರಲಾಗಿದ್ದಂತೆ ಉನ್ನತ ಅಧಿಕಾರ ನೀಡಲು ಸರ್ಕಾರ ನಿರಾಕರಿಸಿದೆ.</p>.<p>‘ಸಹಭಾಗಿತ್ವ ಒಪ್ಪಂದಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅನುಮೋದನೆ ನೀಡಿದ್ದಾರೆ. ಈ ಕುರಿತು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆ–ರೈಡ್) ಅಧಿಕಾರಿ ಸಿರ್ರಾ ಗಗರಿನ್ ಅವರಿಗೆ ಪತ್ರ ಬರೆಯಲಾಗಿದ್ದು, ಎಸ್ಪಿವಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸುವಂತೆ ಹೇಳಲಾಗಿದೆ’ ಎಂದುಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಿಳಿಸಿದ್ದಾರೆ.</p>.<p>ಕಾನೂನು, ಹಣಕಾಸು ಇಲಾಖೆಗಳ ಅಭಿಪ್ರಾಯ ಪಡೆದು ಮುಂದುವರಿಯುವಂತೆಯೂ ಕೆ–ರೈಡ್ಗೆ ಪತ್ರದಲ್ಲಿ ತಿಳಿಸಲಾಗಿದೆ.</p>.<p>‘ಹಣಕಾಸು ಕುರಿತು ನಿರ್ಧರಿಸುವ ಅಧಿಕಾರ ಇಲ್ಲದ ಕಾರಣ ಮತ್ತು ಪ್ರತಿ ಹಂತದಲ್ಲಿಯೂ ಅನುಮತಿ ಪಡೆಯಬೇಕಾದ್ದರಿಂದ, ₹17,000 ಕೋಟಿ ಮೊತ್ತದ ಎಸ್ಪಿವಿ ನಿರ್ಮಾಣ ಕಾರ್ಯ ವಿಳಂಬವಾಗಬಹುದು ಎಂದು ಮೂಲಗಳು ಹೇಳಿವೆ.</p>.<p>‘ಯೋಜನೆ ತ್ವರಿತವಾಗಿ ಅನುಷ್ಠಾನಗೊಳ್ಳಬೇಕೆಂದರೆ ಪ್ರಧಾನಮಂತ್ರಿ ಸಚಿವಾಲಯ ಮಧ್ಯ ಪ್ರವೇಶಿಸಿ, ಎಲ್ಲ ಷರತ್ತುಗಳನ್ನು ಹಿಂತೆಗೆದುಕೊಳ್ಳಬೇಕು’ ಎಂದು ರೈಲ್ವೆ ಹೋರಾಟಗಾರ ಸಂಜೀವ್ ದ್ಯಾಮಣ್ಣವರ ಹೇಳಿದರು.</p>.<p><strong>ಮತ್ತೊಮ್ಮೆ ಡಿಪಿಆರ್ಗೆ ಸೂಚನೆ</strong></p>.<p>ಉಪನಗರ ರೈಲು ಯೋಜನೆಗೆ ಮತ್ತೊಮ್ಮೆ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಹೊಸ ಡಿಪಿಆರ್ ಸಿದ್ಧಪಡಿಸುವಂತೆ ರೈಲ್ ಇಂಡಿಯಾ ಟೆಕ್ನಿಕಲ್ ಎಕನಾಮಿಕಲ್ ಸರ್ವೀಸ್ಗೆ (ರೈಟ್ಸ್) ಸೂಚನೆ ನೀಡಿದೆ.</p>.<p>161 ಕಿ.ಮೀ ರೈಲು ಮಾರ್ಗದ ಯೋಜನೆಗೆ ರೈಟ್ಸ್ ಸಂಸ್ಥೆ ಡಿಪಿಆರ್ ಸಿದ್ಧಪಡಿಸಿದೆ. ನಮ್ಮ ಮೆಟ್ರೊ ಮಾರ್ಗ ಮತ್ತು ನಿಲ್ದಾಣಗಳಿಗೆ ತೊಂದರೆ ಆಗದಂತೆ ಯೋಜನೆ ಜಾರಿಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಡಿಪಿಆರ್ ಬದಲಾವಣೆಗೆ ಸೂಚಿಸಲಾಗಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>