ನಗರದ ನಂದಿನಿ ಬಡಾವಣೆ ನಿವಾಸಿಯಾಗಿರುವ ಹರ್ಷಿತಾ,ಅರ್ಬನ್ ಆ್ಯಂಡ್ ರೀಜನಲ್ ಪ್ಲಾನಿಂಗ್ ವಿಷಯದಲ್ಲಿ (ಎಂ.ಟೆಕ್) 9 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಪ್ಲ್ಯಾನಿಂಗ್ ಆ್ಯಂಡ್ ಆರ್ಕಿಟೆಕ್ಚರ್ನಲ್ಲಿ ವ್ಯಾಸಂಗ ಮಾಡಿರುವ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಂದ ಪದಕಗಳನ್ನು ಸ್ವೀಕರಿಸಿದರು.