ಆಸ್ಪತ್ರೆಯ ನಿರ್ದೇಶಕ ಡಾ. ರಾಜ್ಪಾಲ್ ಸಿಂಗ್ ನೇತೃತ್ವದ ವೈದ್ಯರ ತಂಡ ಅವರನ್ನು ಪರೀಕ್ಷೆ ಮಾಡಿ, ಎಂಆರ್ಐ ಸ್ಕ್ಯಾನಿಂಗ್ಗೆ ಒಳಪಡಿಸಿತು. ಈ ವೇಳೆ ಮಿದುಳಿಗೆ ರಕ್ತವನ್ನು ಪೂರೈಸುವ ನಾಳಗಳ ಕಾರ್ಯದಲ್ಲಿ ವ್ಯತ್ಯಯವಾಗಿರುವುದು ಪತ್ತೆಯಾಯಿತು. ಇದರಿಂದಾಗಿ ಅವರು ಪಾರ್ಶ್ವವಾಯುವಿಗೆ ಒಳಗಾಗಿರುವುದನ್ನು ಗುರುತಿಸಿದ ವೈದ್ಯರು, ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.