ಪಕ್ಷದ ಸದಸ್ಯ ವಿ. ಜ್ಞಾನಮೂರ್ತಿ, ‘ಬಿಜೆಪಿ ಸರ್ಕಾರ, ರೈತ ಹಾಗೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ಇದುವರೆಗೂ ನಾಲ್ಕು ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತಪರ ಕಾಳಜಿ ಇಲ್ಲದ ಕೇಂದ್ರ ಸರ್ಕಾರ, ಬಹುರಾಷ್ಟ್ರೀಯ ಕಂಪನಿಗಳ ಸೇವೆ ಮಾಡುತ್ತಿದೆ. ಇಂಥ ಸರ್ಕಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದು ಎಚ್ಚರಿಸಿದರು.