<p><strong>ಬೆಂಗಳೂರು:</strong>ತೈಲ ದರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಸಂಘಟನೆಯ ಸದಸ್ಯರು ಮಲ್ಲೇಶ್ವರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಎಸ್ಯುಸಿಐ ಬೆಂಗಳೂರು ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ.ಎನ್.ಶ್ರೀರಾಮ್,‘ಕೋವಿಡ್ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ವಸ್ತುಗಳ ಬೆಲೆ ಏರಿಸಿ, ಗಾಯದ ಮೇಲೆ ಬರೆ ಎಳೆಯಲಾಗುತ್ತಿದೆ. ಜನರ ಸಮಸ್ಯೆಗಳಿಗೆ ಸರ್ಕಾರಗಳ ನಿರ್ಲಕ್ಷ್ಯ ಖಂಡನೀಯ’ ಎಂದರು.</p>.<p>‘ಬೆಲೆ ಏರಿಕೆ ನಿಯಂತ್ರಣದ ಮೂಲಕ ಜನರಿಗೆ ನೆರವಾಗಬೇಕಿದ್ದ ಸರ್ಕಾರಗಳು, ಬೆಲೆ ಏರಿಕೆ ಪ್ರಹಾರ ನಡೆಸುತ್ತಿವೆ. ಪೆಟ್ರೋಲ್ ದರ ಶತಕ ದಾಟಿದೆ. ಗ್ಯಾಸ್ ಸಿಲಿಂಡರ್ ದರ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ. ಇದರಿಂದ ಜನಸಾಮಾನ್ಯರ ಮೇಲೆ ಖರ್ಚಿನ ಹೊರೆಯೂ ಏರಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಸರ್ಕಾರಗಳು ಕೋವಿಡ್ ಪರಿಸ್ಥಿತಿ ಇರುವುದರಿಂದ ಜನ ಬೀದಿಗಿಳಿದು ಪ್ರತಿಭಟನೆ ಮಾಡಲಾಗದ ಸ್ಥಿತಿಯನ್ನೇ ಅವಕಾಶ ಮಾಡಿಕೊಂಡು ಬೆಲೆಗಳನ್ನು ಏರಿಸುವ ಮೂಲಕ ಜನವಿರೋಧಿ ನಡೆ ಪ್ರದರ್ಶಿಸಿವೆ. ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಪರ್ಯಾಯ ವಿಧಾನಗಳ ಮೂಲಕ ಪ್ರತಿಭಟನೆ ಮುಂದುವರಿಸಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ತೈಲ ದರ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಸಂಘಟನೆಯ ಸದಸ್ಯರು ಮಲ್ಲೇಶ್ವರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಎಸ್ಯುಸಿಐ ಬೆಂಗಳೂರು ಜಿಲ್ಲಾ ಸಮಿತಿ ಕಾರ್ಯದರ್ಶಿ ಎಂ.ಎನ್.ಶ್ರೀರಾಮ್,‘ಕೋವಿಡ್ ಬಿಕ್ಕಟ್ಟಿನಿಂದ ಸಂಕಷ್ಟದಲ್ಲಿರುವ ಜನರಿಗೆ ಅಗತ್ಯ ವಸ್ತುಗಳ ಬೆಲೆ ಏರಿಸಿ, ಗಾಯದ ಮೇಲೆ ಬರೆ ಎಳೆಯಲಾಗುತ್ತಿದೆ. ಜನರ ಸಮಸ್ಯೆಗಳಿಗೆ ಸರ್ಕಾರಗಳ ನಿರ್ಲಕ್ಷ್ಯ ಖಂಡನೀಯ’ ಎಂದರು.</p>.<p>‘ಬೆಲೆ ಏರಿಕೆ ನಿಯಂತ್ರಣದ ಮೂಲಕ ಜನರಿಗೆ ನೆರವಾಗಬೇಕಿದ್ದ ಸರ್ಕಾರಗಳು, ಬೆಲೆ ಏರಿಕೆ ಪ್ರಹಾರ ನಡೆಸುತ್ತಿವೆ. ಪೆಟ್ರೋಲ್ ದರ ಶತಕ ದಾಟಿದೆ. ಗ್ಯಾಸ್ ಸಿಲಿಂಡರ್ ದರ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ. ಇದರಿಂದ ಜನಸಾಮಾನ್ಯರ ಮೇಲೆ ಖರ್ಚಿನ ಹೊರೆಯೂ ಏರಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಸರ್ಕಾರಗಳು ಕೋವಿಡ್ ಪರಿಸ್ಥಿತಿ ಇರುವುದರಿಂದ ಜನ ಬೀದಿಗಿಳಿದು ಪ್ರತಿಭಟನೆ ಮಾಡಲಾಗದ ಸ್ಥಿತಿಯನ್ನೇ ಅವಕಾಶ ಮಾಡಿಕೊಂಡು ಬೆಲೆಗಳನ್ನು ಏರಿಸುವ ಮೂಲಕ ಜನವಿರೋಧಿ ನಡೆ ಪ್ರದರ್ಶಿಸಿವೆ. ಸಾಮಾಜಿಕ ಮಾಧ್ಯಮಗಳು ಸೇರಿದಂತೆ ಪರ್ಯಾಯ ವಿಧಾನಗಳ ಮೂಲಕ ಪ್ರತಿಭಟನೆ ಮುಂದುವರಿಸಬೇಕು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>