<p><strong>ಬೆಂಗಳೂರು</strong>: ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಾಜ್ (22) ಎಂಬುವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದ್ದು, ಕೃತ್ಯ ಎಸಗಿದ್ದಾರೆ ಎನ್ನಲಾದ ಪತಿ ನಾಸಿರ್ ಹುಸೇನ್ ಪರಾರಿಯಾಗಿದ್ದಾರೆ.</p>.<p>‘ನಾಜ್ ಹಾಗೂ ನಾಸಿರ್ ಹುಸೇನ್, ಪರಸ್ಪರ ಪ್ರೀತಿಸಿ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ತಾವರೆಕೆರೆಯ ಸುಭಾಷ್ ನಗರದ ಅಪಾರ್ಟ್ಮೆಂಟ್ ಸಮುಚ್ಚಯವೊಂದರ ಫ್ಲ್ಯಾಟ್ನಲ್ಲಿ ವಾಸವಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಭಾನುವಾರ ರಾತ್ರಿ ನಾಜ್ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಕೃತ್ಯದ ನಂತರ ಪತಿ ನಾಸಿರ್ ಪರಾರಿಯಾಗಿದ್ದಾನೆ. ನಾಜ್ ಸಂಬಂಧಿಕರು ನೀಡಿರುವ ದೂರು ಆಧರಿಸಿ ನಾಸಿರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತನ ಪತ್ತೆಗೆ ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.</p>.<p class="Subhead"><strong>ಶೀಲ ಶಂಕಿಸಿ ಗಲಾಟೆ:</strong> ‘ಆರೋಪಿ ನಾಸಿರ್ಗೆ ತಂದೆ– ತಾಯಿ ಇಲ್ಲ. ನಾಜ್ ಅವರು ತಮ್ಮ ಪೋಷಕರನ್ನು ಒಪ್ಪಿಸಿ ಆರೋಪಿಯನ್ನು ಮದುವೆಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ನಾಜ್ ಅವರ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪತಿ ಗಲಾಟೆ ಮಾಡಲಾರಂಭಿಸಿದ್ದ. ಈ ಬಗ್ಗೆ ಸಂಬಂಧಿಕರು ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ವಿವರಿಸಿದರು.</p>.<p>‘ನಾಜ್ ಅವರು ಗರ್ಭಿಣಿ ಎಂಬುದು ಇತ್ತೀಚೆಗೆ ಗೊತ್ತಾಗಿತ್ತು. ಅಷ್ಟಕ್ಕೆ ಕೋಪಗೊಂಡಿದ್ದ ಪತಿ, ‘ನೀನು ಅಕ್ರಮ ಸಂಬಂಧವಿಟ್ಟುಕೊಂಡಿದ್ದಿಯಾ? ನಿನ್ನ ಹೊಟ್ಟೆಯಲ್ಲಿರುವ ಮಗು ನನ್ನದಲ್ಲ. ಗರ್ಭಪಾತ ಮಾಡಿಸು’ ಎಂದು ಜಗಳ ತೆಗೆದಿದ್ದ. ಅದಕ್ಕೆ ನಾಜ್ ಒಪ್ಪಿರಲಿಲ್ಲ’ ಎಂದು ಹೇಳಿದರು.</p>.<p class="Subhead"><strong>ಕೊಲೆ ಬಳಿಕ ಸಹೋದರನಿಗೆ ಸಂದೇಶ: </strong>‘ದಂಪತಿ ನಡುವೆ ಭಾನುವಾರ ರಾತ್ರಿಯೂ ಜಗಳ ಶುರುವಾಗಿತ್ತು. ಇದೇ ವೇಳೆಯೇ ಆರೋಪಿ, ಪತ್ನಿ ನಾಜ್ ಮೇಲೆ ಹಲ್ಲೆ ಮಾಡಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಕೊಲೆ ನಂತರ ನಾಜ್ ಅವರ ಸಹೋದರನಿಗೆ ಸಂದೇಶ ಕಳುಹಿಸಿದ್ದ ನಾಸಿರ್, ಸ್ಥಳದಿಂದ ಪರಾರಿಯಾಗಿದ್ದಾನೆ. ಸಂದೇಶ ನೋಡಿ ಗಾಬರಿಗೊಂಡ ಸಂಬಂಧಿಕರು ಮನೆಗೆ ಹೋಗಿ ನೋಡಿದಾಗ ಮೃತದೇಹ ಕಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೋಗಿ ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ಹೇಳಿದರು.</p>.<p>‘ನಾಜ್ ಗರ್ಭಿಣಿಯಾಗಿದ್ದರು ಎಂಬುದಕ್ಕೆ ಪುರಾವೆಯಾಗಿ ವೈದ್ಯಕೀಯ ವರದಿಯ ಚೀಟಿಯೊಂದು ಮನೆಯಲ್ಲಿ ಸಿಕ್ಕಿದೆ. ಮರಣೋತ್ತರ ಪರೀಕ್ಷೆ ನಂತರ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಾಜ್ (22) ಎಂಬುವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದ್ದು, ಕೃತ್ಯ ಎಸಗಿದ್ದಾರೆ ಎನ್ನಲಾದ ಪತಿ ನಾಸಿರ್ ಹುಸೇನ್ ಪರಾರಿಯಾಗಿದ್ದಾರೆ.</p>.<p>‘ನಾಜ್ ಹಾಗೂ ನಾಸಿರ್ ಹುಸೇನ್, ಪರಸ್ಪರ ಪ್ರೀತಿಸಿ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ತಾವರೆಕೆರೆಯ ಸುಭಾಷ್ ನಗರದ ಅಪಾರ್ಟ್ಮೆಂಟ್ ಸಮುಚ್ಚಯವೊಂದರ ಫ್ಲ್ಯಾಟ್ನಲ್ಲಿ ವಾಸವಿದ್ದರು’ ಎಂದು ಪೊಲೀಸರು ಹೇಳಿದರು.</p>.<p>‘ಭಾನುವಾರ ರಾತ್ರಿ ನಾಜ್ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಕೃತ್ಯದ ನಂತರ ಪತಿ ನಾಸಿರ್ ಪರಾರಿಯಾಗಿದ್ದಾನೆ. ನಾಜ್ ಸಂಬಂಧಿಕರು ನೀಡಿರುವ ದೂರು ಆಧರಿಸಿ ನಾಸಿರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತನ ಪತ್ತೆಗೆ ತನಿಖೆ ಮುಂದುವರಿಸಲಾಗಿದೆ’ ಎಂದು ತಿಳಿಸಿದರು.</p>.<p class="Subhead"><strong>ಶೀಲ ಶಂಕಿಸಿ ಗಲಾಟೆ:</strong> ‘ಆರೋಪಿ ನಾಸಿರ್ಗೆ ತಂದೆ– ತಾಯಿ ಇಲ್ಲ. ನಾಜ್ ಅವರು ತಮ್ಮ ಪೋಷಕರನ್ನು ಒಪ್ಪಿಸಿ ಆರೋಪಿಯನ್ನು ಮದುವೆಯಾಗಿದ್ದರು. ಇತ್ತೀಚಿನ ದಿನಗಳಲ್ಲಿ ನಾಜ್ ಅವರ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪತಿ ಗಲಾಟೆ ಮಾಡಲಾರಂಭಿಸಿದ್ದ. ಈ ಬಗ್ಗೆ ಸಂಬಂಧಿಕರು ಮಾಹಿತಿ ನೀಡಿದ್ದಾರೆ’ ಎಂದು ಪೊಲೀಸರು ವಿವರಿಸಿದರು.</p>.<p>‘ನಾಜ್ ಅವರು ಗರ್ಭಿಣಿ ಎಂಬುದು ಇತ್ತೀಚೆಗೆ ಗೊತ್ತಾಗಿತ್ತು. ಅಷ್ಟಕ್ಕೆ ಕೋಪಗೊಂಡಿದ್ದ ಪತಿ, ‘ನೀನು ಅಕ್ರಮ ಸಂಬಂಧವಿಟ್ಟುಕೊಂಡಿದ್ದಿಯಾ? ನಿನ್ನ ಹೊಟ್ಟೆಯಲ್ಲಿರುವ ಮಗು ನನ್ನದಲ್ಲ. ಗರ್ಭಪಾತ ಮಾಡಿಸು’ ಎಂದು ಜಗಳ ತೆಗೆದಿದ್ದ. ಅದಕ್ಕೆ ನಾಜ್ ಒಪ್ಪಿರಲಿಲ್ಲ’ ಎಂದು ಹೇಳಿದರು.</p>.<p class="Subhead"><strong>ಕೊಲೆ ಬಳಿಕ ಸಹೋದರನಿಗೆ ಸಂದೇಶ: </strong>‘ದಂಪತಿ ನಡುವೆ ಭಾನುವಾರ ರಾತ್ರಿಯೂ ಜಗಳ ಶುರುವಾಗಿತ್ತು. ಇದೇ ವೇಳೆಯೇ ಆರೋಪಿ, ಪತ್ನಿ ನಾಜ್ ಮೇಲೆ ಹಲ್ಲೆ ಮಾಡಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಕೊಲೆ ನಂತರ ನಾಜ್ ಅವರ ಸಹೋದರನಿಗೆ ಸಂದೇಶ ಕಳುಹಿಸಿದ್ದ ನಾಸಿರ್, ಸ್ಥಳದಿಂದ ಪರಾರಿಯಾಗಿದ್ದಾನೆ. ಸಂದೇಶ ನೋಡಿ ಗಾಬರಿಗೊಂಡ ಸಂಬಂಧಿಕರು ಮನೆಗೆ ಹೋಗಿ ನೋಡಿದಾಗ ಮೃತದೇಹ ಕಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೋಗಿ ಮೃತದೇಹವನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ಹೇಳಿದರು.</p>.<p>‘ನಾಜ್ ಗರ್ಭಿಣಿಯಾಗಿದ್ದರು ಎಂಬುದಕ್ಕೆ ಪುರಾವೆಯಾಗಿ ವೈದ್ಯಕೀಯ ವರದಿಯ ಚೀಟಿಯೊಂದು ಮನೆಯಲ್ಲಿ ಸಿಕ್ಕಿದೆ. ಮರಣೋತ್ತರ ಪರೀಕ್ಷೆ ನಂತರ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>