<p><strong>ಬೆಂಗಳೂರು</strong>: ‘ಇನ್ಫೊಸಿಸ್ನ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ ಅವರು ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ ಎಂದು ನಿರಾಕರಿಸಿ ಸ್ವಯಂ ದೃಢೀಕರಿಸಿದ್ದ ಪತ್ರವು ಸೋರಿಕೆಯಾಗಿದ್ದು ಹೇಗೆ’ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.</p>.ಜಾತಿವಾರು ಸಮೀಕ್ಷೆ: ಮಾಹಿತಿ ನೀಡಲು ಸುಧಾ-ನಾರಾಯಣಮೂರ್ತಿ ನಿರಾಕರಣೆ.<p>ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಸಮೀಕ್ಷೆಗೆ ವಿರೋಧ ವ್ಯಕ್ತವಾದಾಗ ಮತ್ತು ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸುವಾಗ ರಾಜ್ಯ ಸರ್ಕಾರವು, ‘ಸಮೀಕ್ಷೆಯ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು’ ಎಂದು ಹೇಳಿತ್ತು. ಈಗ ಈ ಪತ್ರ ಸೋರಿಕೆಯಾಗಿದ್ದು ಹೇಗೆ ಎಂಬುದನ್ನು ಸರ್ಕಾರ ವಿವರಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಇದು ರಾಜ್ಯದ ಜನರಿಗೆ, ನ್ಯಾಯಾಲಯಕ್ಕೆ ಬಗೆದ ದ್ರೋಹ. ನಾರಾಯಣಮೂರ್ತಿ ಅವರ ಕುಟುಂಬದ ಖಾಸಗಿತನಕ್ಕೆ ಸರ್ಕಾರ ಧಕ್ಕೆ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಇನ್ಫೊಸಿಸ್ನ ನಾರಾಯಣಮೂರ್ತಿ ಮತ್ತು ಸುಧಾ ಮೂರ್ತಿ ಅವರು ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ ಎಂದು ನಿರಾಕರಿಸಿ ಸ್ವಯಂ ದೃಢೀಕರಿಸಿದ್ದ ಪತ್ರವು ಸೋರಿಕೆಯಾಗಿದ್ದು ಹೇಗೆ’ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.</p>.ಜಾತಿವಾರು ಸಮೀಕ್ಷೆ: ಮಾಹಿತಿ ನೀಡಲು ಸುಧಾ-ನಾರಾಯಣಮೂರ್ತಿ ನಿರಾಕರಣೆ.<p>ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಸಮೀಕ್ಷೆಗೆ ವಿರೋಧ ವ್ಯಕ್ತವಾದಾಗ ಮತ್ತು ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸುವಾಗ ರಾಜ್ಯ ಸರ್ಕಾರವು, ‘ಸಮೀಕ್ಷೆಯ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು’ ಎಂದು ಹೇಳಿತ್ತು. ಈಗ ಈ ಪತ್ರ ಸೋರಿಕೆಯಾಗಿದ್ದು ಹೇಗೆ ಎಂಬುದನ್ನು ಸರ್ಕಾರ ವಿವರಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>‘ಇದು ರಾಜ್ಯದ ಜನರಿಗೆ, ನ್ಯಾಯಾಲಯಕ್ಕೆ ಬಗೆದ ದ್ರೋಹ. ನಾರಾಯಣಮೂರ್ತಿ ಅವರ ಕುಟುಂಬದ ಖಾಸಗಿತನಕ್ಕೆ ಸರ್ಕಾರ ಧಕ್ಕೆ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>