‘ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ತರಗತಿ ಪ್ರಾರಂಭಿಸಲಾಗಿದ್ದು, ಜುಲೈವರೆಗೂ ಆನ್ಲೈನ್ನಲ್ಲೇಪಾಠ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಸಿಬ್ಬಂದಿಯ ಕೊರತೆಯಾಗಿದೆ ಎಂದು ಹೇಳಿ ಹಲವು ವಿದ್ಯಾರ್ಥಿಗಳನ್ನು ಕೋವಿಡ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಕೋವಿಡ್ ಮೂರನೇ ಅಲೆಯ ವೇಳೆಯೂ ಹಲವರು ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಹೀಗಾಗಿ ಪರೀಕ್ಷಾ ಸಿದ್ಧತೆಗೆ ಸಮಯವೇ ಸಿಕ್ಕಿಲ್ಲ ಎಂದುಎಐಡಿಎಸ್ಒ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ. ಪರೀಕ್ಷಾ ಸಿದ್ಧತೆಗೆ ಬೇಕಾದಷ್ಟು ಕಾಲಾವಕಾಶವನ್ನು ವಿದ್ಯಾರ್ಥಿಗಳಿಗೆ ನೀಡುವಂತೆಯೂ ಮನವಿ ಮಾಡಿದೆ. ಇದನ್ನು ಪರಿಗಣಿಸಿ ಪರೀಕ್ಷೆ ಮುಂದೂಡಲು ಕ್ರಮ ಕೈಗೊಳ್ಳಿ’ ಎಂದುಕುಲಪತಿಯವರಿಗೆ ಬರೆದಿರುವ ಪತ್ರದಲ್ಲಿ ಸುಧಾಕರ್ ವಿವರಿಸಿದ್ದಾರೆ.