ಒಕ್ಕೂಟದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಒಕ್ಕೂಟದ ಉಪಾಧ್ಯಕ್ಷರಾಗಿ ಬಂಡ್ಲಹಳ್ಳಿ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಟಿ. ರಾಜಾರಾಮ್, ಸಂಘಟನಾ ಕಾರ್ಯದರ್ಶಿಯಾಗಿ ಇಂಚರ ಪ್ರವೀಣ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಗಣೇಶ್ ದೇಸಾಯಿ, ಉಷಾ ಉಮೇಶ್, ಖಜಾಂಚಿಯಾಗಿ ಅನುರಾಗ್ ಗದ್ದಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ವೆಂಕಟೇಶಮೂರ್ತಿ ಶಿರೂರು, ರಾಜಶೇಖರ ನುಲಿ, ಕೆಂಕೆರೆ ಮಲ್ಲಿಕಾರ್ಜುನ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.