<p><strong>ಬೆಂಗಳೂರು:</strong> ಕಬ್ಬಿಗೆ ದರ ನಿಗದಿ ಮಾಡುವ ಬಗ್ಗೆ ರಾಜ್ಯ ಸರ್ಕಾರವು ಸ್ಪಷ್ಟ ತೀರ್ಮಾನ ಕೈಗೊಳ್ಳದೇ ಇದ್ದರೆ ಕಬ್ಬು ಬೆಳೆಗಾರರ ಹೋರಾಟವನ್ನು ರಾಜ್ಯ ವ್ಯಾಪಿ ನಡೆಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕ ಎಚ್ಚರಿಕೆ ನೀಡಿದೆ.</p>.<p>ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳಾದ ಎಚ್.ಆರ್. ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ಸಿದಗೌಡ ಮೋದಗಿ, ನೂರ್ ಶ್ರೀಧರ್, ಟಿ.ಯಶವಂತ, ಭಗವಾನ್ ರೆಡ್ಡಿ, ಡಿ.ಎಚ್. ಪೂಜಾರ್ ಈ ಬಗ್ಗೆ ಹೇಳಿಕೆ ನೀಡಿದ್ದು, ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ ನೀಡಲಾಗುವುದು ಎಂದು ಘೋಷಿಸಿದ್ದಾರೆ.</p>.<p>ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ. ಬೆಳಗಾವಿಯ ಕಬ್ಬು ಬೆಳೆಯುವ ರೈತರ ಹಕ್ಕೊತ್ತಾಯದಂತೆ ಪ್ರತಿ ಟನ್ನಿಗೆ ₹3,500 ನಿಗದಿಪಡಿಸಬೇಕು. ಗುಜರಾತ್, ಪಂಜಾಬ್, ಉತ್ತರ ಪ್ರದೇಶ, ಹರಿಯಾಣ ರಾಜ್ಯಗಳಲ್ಲಿ ಸಲಹಾ ಬೆಲೆ ನೀತಿ ಉಳಿಸಿಕೊಳ್ಳಲಾಗಿದೆ. ತಮಿಳುನಾಡಿನಲ್ಲಿ ಎಫ್ಆರ್ಪಿ ಜೊತೆಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಕರ್ನಾಟಕದಲ್ಲೂ ರಾಜ್ಯದ ರೈತರ ಹಿತಕಾಯಲು ರಾಜ್ಯ ಬೆಲೆ ನೀತಿ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಈ ಸಮಸ್ಯೆ ಉಲ್ಬಣಗೊಳ್ಳಲು ಕೇಂದ್ರ ಸರ್ಕಾರ ನೇರ ಹೊಣೆ. ಎಥೆನಾಲ್ ಉತ್ಪಾದನೆಯ ಪ್ರಮಾಣ ನಿಗದಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಗುಜರಾತಿನಲ್ಲಿ ಕಾರ್ಖಾನೆಗಳಿಗೆ ಶೇ 70ರಷ್ಟು ಎಥೆನಾಲ್ ಉತ್ಪಾದನೆ ಅವಕಾಶ ಕೊಟ್ಟಿದ್ದರೆ, ರಾಜ್ಯದ ಕಾರ್ಖಾನೆಗಳಿಗೆ ಶೇ 17ಕ್ಕೆ ನಿರ್ಬಂಧಿಸಲಾಗಿದೆ. ಈ ಅನ್ಯಾಯವನ್ನು ಸರಿಪಡಿಸಿ ಶೇ 30ರಷ್ಟು ಎಥೆನಾಲ್ ಉತ್ಪಾದನೆಗೆ ಅವಕಾಶ ಕೊಡಬೇಕು. ಕೇಂದ್ರ ಸರ್ಕಾರ ಎಫ್ಆರ್ಸಿ ದರ ನಿಗದಿಯನ್ನು ಮರುಪರಿಷ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಬ್ಬಿಗೆ ದರ ನಿಗದಿ ಮಾಡುವ ಬಗ್ಗೆ ರಾಜ್ಯ ಸರ್ಕಾರವು ಸ್ಪಷ್ಟ ತೀರ್ಮಾನ ಕೈಗೊಳ್ಳದೇ ಇದ್ದರೆ ಕಬ್ಬು ಬೆಳೆಗಾರರ ಹೋರಾಟವನ್ನು ರಾಜ್ಯ ವ್ಯಾಪಿ ನಡೆಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕ ಎಚ್ಚರಿಕೆ ನೀಡಿದೆ.</p>.<p>ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳಾದ ಎಚ್.ಆರ್. ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ಸಿದಗೌಡ ಮೋದಗಿ, ನೂರ್ ಶ್ರೀಧರ್, ಟಿ.ಯಶವಂತ, ಭಗವಾನ್ ರೆಡ್ಡಿ, ಡಿ.ಎಚ್. ಪೂಜಾರ್ ಈ ಬಗ್ಗೆ ಹೇಳಿಕೆ ನೀಡಿದ್ದು, ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ ನೀಡಲಾಗುವುದು ಎಂದು ಘೋಷಿಸಿದ್ದಾರೆ.</p>.<p>ವಿವಿಧ ರೈತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ. ಬೆಳಗಾವಿಯ ಕಬ್ಬು ಬೆಳೆಯುವ ರೈತರ ಹಕ್ಕೊತ್ತಾಯದಂತೆ ಪ್ರತಿ ಟನ್ನಿಗೆ ₹3,500 ನಿಗದಿಪಡಿಸಬೇಕು. ಗುಜರಾತ್, ಪಂಜಾಬ್, ಉತ್ತರ ಪ್ರದೇಶ, ಹರಿಯಾಣ ರಾಜ್ಯಗಳಲ್ಲಿ ಸಲಹಾ ಬೆಲೆ ನೀತಿ ಉಳಿಸಿಕೊಳ್ಳಲಾಗಿದೆ. ತಮಿಳುನಾಡಿನಲ್ಲಿ ಎಫ್ಆರ್ಪಿ ಜೊತೆಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಕರ್ನಾಟಕದಲ್ಲೂ ರಾಜ್ಯದ ರೈತರ ಹಿತಕಾಯಲು ರಾಜ್ಯ ಬೆಲೆ ನೀತಿ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಈ ಸಮಸ್ಯೆ ಉಲ್ಬಣಗೊಳ್ಳಲು ಕೇಂದ್ರ ಸರ್ಕಾರ ನೇರ ಹೊಣೆ. ಎಥೆನಾಲ್ ಉತ್ಪಾದನೆಯ ಪ್ರಮಾಣ ನಿಗದಿಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಗುಜರಾತಿನಲ್ಲಿ ಕಾರ್ಖಾನೆಗಳಿಗೆ ಶೇ 70ರಷ್ಟು ಎಥೆನಾಲ್ ಉತ್ಪಾದನೆ ಅವಕಾಶ ಕೊಟ್ಟಿದ್ದರೆ, ರಾಜ್ಯದ ಕಾರ್ಖಾನೆಗಳಿಗೆ ಶೇ 17ಕ್ಕೆ ನಿರ್ಬಂಧಿಸಲಾಗಿದೆ. ಈ ಅನ್ಯಾಯವನ್ನು ಸರಿಪಡಿಸಿ ಶೇ 30ರಷ್ಟು ಎಥೆನಾಲ್ ಉತ್ಪಾದನೆಗೆ ಅವಕಾಶ ಕೊಡಬೇಕು. ಕೇಂದ್ರ ಸರ್ಕಾರ ಎಫ್ಆರ್ಸಿ ದರ ನಿಗದಿಯನ್ನು ಮರುಪರಿಷ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>