‘ಹೋರಾಟಕ್ಕೆ ರಾಜ್ಯ ಸರ್ಕಾರದ ಸ್ಪಂದಿಸುತ್ತಿಲ್ಲ’ ಎಂದು ಆರೋಪಿಸಿದ ರೈತರು, ಉದ್ಯಾನ ಎದುರಿನ ಮುಖ್ಯರಸ್ತೆಯಲ್ಲಿ ಅಣಕು ಶವಯಾತ್ರೆ ನಡೆಸಲು ಶನಿವಾರ ಬೆಳಿಗ್ಗೆ ಸಿದ್ಧತೆ ಮಾಡಿಕೊಂಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಶವಯಾತ್ರೆ ನಡೆಸಲು ತಂದಿದ್ದ ವಸ್ತುಗಳನ್ನು ಜಪ್ತಿ ಮಾಡಿದರು. ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ ರೈತರು, ಶವಯಾತ್ರೆ ನಡೆಸುವುದಾಗಿ ಪಟ್ಟು ಹಿಡಿದಿದ್ದರು.