ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಜೀವನದ ಶ್ರೀಮಂತ ಬದುಕನ್ನು ನಗರ ನಿವಾಸಿಗಳಿಗೂ ಪರಿಚಯಿಸಬೇಕೆಂಬ ಉದ್ದೇಶದಿಂದ ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸುಗ್ಗಿ–ಹುಗ್ಗಿ ಎಂಬ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಇದರಲ್ಲಿ ಗ್ರಾಮೀಣ ಆಹಾರ ಪದ್ಧತಿ, ಸಂಪ್ರದಾಯ, ಸಂಸ್ಕೃತಿಯ ಕಾರ್ಯಕ್ರಮಗಳಿರುತ್ತವೆ. ಸಿರಿಧಾನ್ಯ ಮತ್ತು ಸಾವಯವ ಪದಾರ್ಥಗಳು ಸೇರಿದಂತೆ ವೈವಿಧ್ಯಮಯ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡುವ 80ಕ್ಕೂ ಹೆಚ್ಚು ಮಳಿಗೆಗಳಿರಲಿವೆ’ ಎಂದು ವಿವರಿಸಿದರು.