‘ಮಂಡ್ಯ ಜಿಲ್ಲೆಯ ಮದ್ದೂರಿನ ಸಿದ್ದರಾಮ, ನಗರದಲ್ಲಿ ಬಡಗಿ ಕೆಲಸ ಮಾಡುತ್ತಿದ್ದರು. ರಾಜರಾಜೇಶ್ವರಿನಗರದಲ್ಲಿರುವ ಅಕ್ಕನ ಮನೆಯಲ್ಲಿ ವಾಸವಿದ್ದರು. ಅದೇ ಮನೆಯ ಕೊಠಡಿಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಸಂಬಂಧಿ ಯುವತಿಯೊಬ್ಬರನ್ನು ಸಿದ್ದರಾಮ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಪ್ರೀತಿಯಲ್ಲಿ ಮನಸ್ತಾಪವಾಗಿದ್ದರಿಂದ ಅವರು ಮಾನಸಿಕವಾಗಿ ನೊಂದಿದ್ದರೆಂದು ಗೊತ್ತಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಆತ್ಮಹತ್ಯೆ ಬಗ್ಗೆ ಕುಟುಂಬದವರ ಹೇಳಿಕೆ ಪಡೆಯಬೇಕಿದೆ’ ಎಂದೂ ಮೂಲಗಳು ತಿಳಿಸಿವೆ.